ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 246 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಇಂದು 641 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಇಂದಿನ 246 ಪ್ರಕರಣಗಳ ಜೊತೆಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8071 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 1948 ಸಕ್ರಿಯ ಕೊರೊನ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ ಇನ್ನೂರೈವತ್ತಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು-150, ಬಂಟ್ವಾಳ-47, ಸುಳ್ಯ-7, ಬೆಳ್ತಂಗಡಿ-15, ಪುತ್ತೂರು-16 , ಹೊರಜಿಲ್ಲೆಯವರು-11 ಪ್ರಕರಣಗಳಿವೆ.
ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.12ರಂದು ನಡೆದ ರ್ಯಾಂಡಮ್ ಆಂಟಿಜೆನಿಕ್ ಪರೀಕ್ಷೆಯಲ್ಲಿ ಇಬ್ಬರು ವ್ಯಕ್ತಿಗಳ ವರದಿ ಪಾಸಿಟಿವ್ ಬಂದಿದೆ.
ಬೆಳ್ಳಾರೆಯ ಪಿಡಿಒ ಅವರಿಗೂ ಕೋವಿಡ್ ಸೋಂಕಿರುವುದು ದೃಢ ಪಟ್ಟಿದ್ದು, ಇಂದು ಮಧ್ಯಾಹ್ನದಿಂದ ಪಂಚಾಯತ್ ಕಛೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಬೆಳ್ಳಾರೆಯಲ್ಲಿ ರ್ಯಾಂಡಮ್ ಟೆಸ್ಟ್ ವೇಳೆ ಪಿಡಿಒರವರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಪಿಡಿಒ ಜೊತೆ ಸಂಪರ್ಕ ಇದ್ದವರು ರ್ಯಾಂಡಮ್ ಟೆಸ್ಟ್ ಗೆ ಒಳಪಡಲು ಮನವಿ ಮಾಡಲಾಗಿದೆ.
ಮೈಸೂರು ಜಿಲ್ಲೆಯ ಮೇಲ್ಸೇತುವೆ ಕಾಮಗಾರಿಗಳ ವೇಳೆ ಯಾವುದೇ ಮರಗಳನ್ನು ಕಡಿಯುವುದಿಲ್ಲ ಎಂದು ಸಂಸದ…
ರಾಜ್ಯದ ಒಳನಾಡಿನ ಕೆಲವೆಡೆ ಮಳೆಯಾಗಿದ್ದು, ಕುಕನೂರಿನಲ್ಲಿ 7 ಸೆಂ.ಮೀ ಮಳೆಯಾಗಿದೆ. ಕಲಬುರಗಿಯಲ್ಲಿ 41…
08.05.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದ ಹಲವು…
ದೇಶದ ಹಲವೆಡೆ ಬಿಸಿಗಾಳಿ ತೀವ್ರವಾಗಿದ್ದು, ಕೆಲ ರಾಜ್ಯಗಳಲ್ಲಿ ಮಳೆ ಹಾಗೂ ಮೋಡ ಕವಿದ…
ಪರಿಸರ ಮಾಲಿನ್ಯ ಮತ್ತು ಹಸಿರು ಹೊದಿಕೆ ನಾಶದಿಂದ ಆರೋಗ್ಯ ಸಮಸ್ಯೆಗಳು ಹೆಚ್ಚುತ್ತಿವೆ. ಪ್ರಕೃತಿ…
ರಾಜ್ಯದಲ್ಲಿ ಬಾಕಿ ಇರುವ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಶೀಘ್ರದಲ್ಲೇ ನಡೆಸಲು ಸರ್ಕಾರ ಸಿದ್ಧವಿದೆ…