ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ 246 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಇಂದು 641 ಮಂದಿ ಕೊರೋನಾ ಸೋಂಕು ಮುಕ್ತರಾಗಿ ಮನೆಗೆ ತೆರಳಿದ್ದಾರೆ.
ಇಂದಿನ 246 ಪ್ರಕರಣಗಳ ಜೊತೆಗೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 8071 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದೆ. ಸದ್ಯ ಆಸ್ಪತ್ರೆಯಲ್ಲಿ 1948 ಸಕ್ರಿಯ ಕೊರೊನ ಪ್ರಕರಣಗಳಿದ್ದು, ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಜಿಲ್ಲೆಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಇದುವರೆಗೆ ಮೃತಪಟ್ಟವರ ಸಂಖ್ಯೆ ಇನ್ನೂರೈವತ್ತಕ್ಕೆ ಏರಿಕೆಯಾಗಿದೆ. ಇಂದು ದಾಖಲಾದ ಪ್ರಕರಣಗಳಲ್ಲಿ ಮಂಗಳೂರು-150, ಬಂಟ್ವಾಳ-47, ಸುಳ್ಯ-7, ಬೆಳ್ತಂಗಡಿ-15, ಪುತ್ತೂರು-16 , ಹೊರಜಿಲ್ಲೆಯವರು-11 ಪ್ರಕರಣಗಳಿವೆ.
ಸುಬ್ರಹ್ಮಣ್ಯದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆ.12ರಂದು ನಡೆದ ರ್ಯಾಂಡಮ್ ಆಂಟಿಜೆನಿಕ್ ಪರೀಕ್ಷೆಯಲ್ಲಿ ಇಬ್ಬರು ವ್ಯಕ್ತಿಗಳ ವರದಿ ಪಾಸಿಟಿವ್ ಬಂದಿದೆ.
ಬೆಳ್ಳಾರೆಯ ಪಿಡಿಒ ಅವರಿಗೂ ಕೋವಿಡ್ ಸೋಂಕಿರುವುದು ದೃಢ ಪಟ್ಟಿದ್ದು, ಇಂದು ಮಧ್ಯಾಹ್ನದಿಂದ ಪಂಚಾಯತ್ ಕಛೇರಿಯನ್ನು ಸೀಲ್ ಡೌನ್ ಮಾಡಲಾಗಿದೆ. ಬೆಳ್ಳಾರೆಯಲ್ಲಿ ರ್ಯಾಂಡಮ್ ಟೆಸ್ಟ್ ವೇಳೆ ಪಿಡಿಒರವರಿಗೆ ಕೋವಿಡ್ ಸೋಂಕಿರುವುದು ದೃಢಪಟ್ಟಿರುವುದಾಗಿ ತಿಳಿದು ಬಂದಿದೆ. ಪಿಡಿಒ ಜೊತೆ ಸಂಪರ್ಕ ಇದ್ದವರು ರ್ಯಾಂಡಮ್ ಟೆಸ್ಟ್ ಗೆ ಒಳಪಡಲು ಮನವಿ ಮಾಡಲಾಗಿದೆ.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…