ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಲಾಕ್ಡೌನ್ ಜಾರಿಗೆ ತರುವ ಬಗ್ಗೆ ಯಾವುದೇ ನಿರ್ಧಾರ ಆಗಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟ ಪಡಿಸಿದ್ದಾರೆ.
ಜಿಲ್ಲೆಯ ಕೋವಿಡ್ ಪರಿಸ್ಥಿತಿ ಅಧ್ಯಯನ ಮಾಡಲು ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಹಾಗೂ ಜಿಲ್ಲಾಧಿಕಾರಿಗಳ ಜತೆ ಸಭೆ ನಡೆಸಲಾಗಿದೆ. ಸಭೆಯಲ್ಲಿ ಲಾಕ್ಡೌನ್ ಕುರಿತು ಯಾವುದೇ ತೀರ್ಮಾನ ಕೈಗೊಂಡಿಲ್ಲ. ಸೋಮವಾರ ಬೆಳಗ್ಗೆ 11 ಗಂಟೆಗೆ ಜಿಲ್ಲೆಯ ಪರಿಸ್ಥಿತಿ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ತಾನು, ಲೋಕಸಭಾ ಸದಸ್ಯರು ಹಾಗೂ ಜಿಲ್ಲಾಧಿಕಾರಿಗಳು ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಲಿದ್ದು, ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಜಿಲ್ಲೆಯ ಅಲ್ಲಲ್ಲಿ ಸಾರ್ವಜನಿಕರು ಸ್ವಯಂ ಪ್ರೇರಿತವಾಗಿ ಲಾಕ್ಡೌನ್ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಜನರಿಗೆ ತೊಂದರೆ ಆಗುವ ಯಾವುದೇ ನಿರ್ಧಾರವನ್ನು ದಿಢೀರನೇ ಜಾರಿಗೆ ತರುವುದಿಲ್ಲ. ಜನರು ಗೊಂದಲಕ್ಕೀಡಾಗಬಾರದು. ಯಾವುದೇ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಮುಖ್ಯಮಂತ್ರಿಗಳ ಸಲಹೆ ಸೂಚನೆಯಂತೆ ಅನುಸರಿಸಲಾಗುವುದು ಎಂದು ಸಚಿವ ಕೋಟ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…