ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ : ಬೆಳೆಗಾರರಿಗೆ ಸಂಕಷ್ಟ

September 15, 2019
12:30 PM

ಮಡಿಕೇರಿ : ಮಹಾಮಳೆಯ ಪ್ರವಾಹದಿಂದ ಕಂಗೆಟ್ಟಿದ್ದ ದಕ್ಷಿಣ ಕೊಡಗಿನ ರೈತರಿಗೆ ಹಾಗೂ ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂಡು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ಲಗ್ಗೆ ಇಟ್ಟಿದ್ದು, ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.

ಶ್ರೀಮಂಗಲ ಗ್ರಾ.ಪಂ. ವ್ಯಾಪ್ತಿಯ ಕುರ್ಚಿ ಗ್ರಾಮದ ಎ.ಬಿ. ನಾಚಪ್ಪ ಮತ್ತು ಎ.ಟಿ. ಬೊಳ್ಳಮ್ಮ ಅವರ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡುಗಳು ಫಸಲು ಇರುವ ಕಾಫಿ ಗಿಡಗಳನ್ನು ಬುಡ ಸಹಿತ ತುಳಿದು ಹಾಕಿದೆ, ಅಡಿಕೆ, ಕಾಳು ಮೆಣಸು ಫಸಲನ್ನು ಕೂಡ ನಾಶ ಮಾಡಿವೆ.ಅತಿವೃಷ್ಟಿಯಿಂದ ಭಾರೀ ನಷ್ಟ ಉಂಟಾಗಿರುವ ಬೆನ್ನಲ್ಲೇ ಅಳಿದುಳಿದ ಬೆಳೆಯನ್ನು ಕಾಡಾನೆಗಳು ನುಗ್ಗಿ ನಾಶಪಡಿಸುತ್ತಿದ್ದು, ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೆಳೆಗಾರ ಎ.ಬಿ.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಮತ್ತೊಂದೆಡೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಅಮ್ಮತ್ತಿ, ಸಿದಾಪುರ ಭಾಗದಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ರೈತರು ಬೆಳೆದ ಭತ್ತ, ಕಾಫಿ, ತೆಂಗು, ಬಾಳೆ, ಅಡಕೆ ಸೇರಿದಂತೆ ಇತರ ಕೃಷಿ ಫಸಲುಗಳನ್ನು ಕಾಡಾನೆಗಳು ತುಳಿದು, ತಿಂದು ನಾಶ ಮಾಡುವ ಮೂಲಕ ಭಾರೀ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿವೆ.

ರಾತ್ರಿ ಮಾತ್ರವಲ್ಲದೆ, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳ ಹಿಂಡಿನ ಭಯದಿಂದ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕ್ ಹಾಗೂ ಕೈ ಸಾಲ ಮಾಡಿ ಬೆಳೆಸಿದ ಕೃಷಿಯನ್ನು ಕಾಡಾನೆಗಳು ತುಳಿದು ತಿಂದು ನಾಶ ಮಾಡುವ ಮೂಲಕ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿವೆ.ಇದರಿಂದ ರೈತರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿರುವ ಕೃಷಿಕರು ಸರಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಹೆಚ್ಚಿನ ಮೊತ್ತದಲ್ಲಿ ಪರಿಹಾರ ನೀಡುವ ಮೂಲಕ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಬ್ಬರ್ ಕ್ಷೇತ್ರಕ್ಕೆ ಹೊಸ ಅವಕಾಶ – ಈಗ ಅಸ್ಸಾಂ ದೇಶದ ಮೂರನೇ ಅತಿದೊಡ್ಡ ರಬ್ಬರ್ ಉತ್ಪಾದಕ ರಾಜ್ಯ
June 11, 2026
7:43 PM
by: ದ ರೂರಲ್ ಮಿರರ್.ಕಾಂ
ನಕಲಿ ಹೆಲಿಕಾಪ್ಟರ್ ಬುಕ್ಕಿಂಗ್ ಜಾಲ ಭೇದಿಸಿದ ದೆಹಲಿ ಪೊಲೀಸರು, ಮೂವರು ಬಂಧನ
June 11, 2026
7:36 PM
by: ದ ರೂರಲ್ ಮಿರರ್.ಕಾಂ
ಮಳೆಗಾಲದ ಎಚ್ಚರಿಕೆ: ರಸ್ತೆ ಡಿವೈಡರ್‌ಗಳ ಮೇಲಿನ ಫ್ಲೆಕ್ಸ್‌, ಬ್ಯಾನರ್‌ ತೆರವುಗೊಳಿಸಲು ಜಿಲ್ಲಾಧಿಕಾರಿ ಸೂಚನೆ
June 11, 2026
6:56 PM
by: ಮಿರರ್‌ ಡೆಸ್ಕ್
ಕೇರಳದಲ್ಲಿ ಜೂನ್ 12-13 ರಂದು ಭಾರೀ ಮಳೆ ಎಚ್ಚರಿಕೆ – ಬೆಂಗಳೂರು ಸೇರಿ ಕರ್ನಾಟಕದ ಹಲವು ಭಾಗಗಳಲ್ಲಿ ಉತ್ತಮ ಮಳೆ ಸಾಧ್ಯತೆ
June 11, 2026
4:50 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror