Advertisement
ಸುದ್ದಿಗಳು

ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ : ಬೆಳೆಗಾರರಿಗೆ ಸಂಕಷ್ಟ

Share

ಮಡಿಕೇರಿ : ಮಹಾಮಳೆಯ ಪ್ರವಾಹದಿಂದ ಕಂಗೆಟ್ಟಿದ್ದ ದಕ್ಷಿಣ ಕೊಡಗಿನ ರೈತರಿಗೆ ಹಾಗೂ ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂಡು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ಲಗ್ಗೆ ಇಟ್ಟಿದ್ದು, ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.

Advertisement
Advertisement
Advertisement
Advertisement

ಶ್ರೀಮಂಗಲ ಗ್ರಾ.ಪಂ. ವ್ಯಾಪ್ತಿಯ ಕುರ್ಚಿ ಗ್ರಾಮದ ಎ.ಬಿ. ನಾಚಪ್ಪ ಮತ್ತು ಎ.ಟಿ. ಬೊಳ್ಳಮ್ಮ ಅವರ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡುಗಳು ಫಸಲು ಇರುವ ಕಾಫಿ ಗಿಡಗಳನ್ನು ಬುಡ ಸಹಿತ ತುಳಿದು ಹಾಕಿದೆ, ಅಡಿಕೆ, ಕಾಳು ಮೆಣಸು ಫಸಲನ್ನು ಕೂಡ ನಾಶ ಮಾಡಿವೆ.ಅತಿವೃಷ್ಟಿಯಿಂದ ಭಾರೀ ನಷ್ಟ ಉಂಟಾಗಿರುವ ಬೆನ್ನಲ್ಲೇ ಅಳಿದುಳಿದ ಬೆಳೆಯನ್ನು ಕಾಡಾನೆಗಳು ನುಗ್ಗಿ ನಾಶಪಡಿಸುತ್ತಿದ್ದು, ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೆಳೆಗಾರ ಎ.ಬಿ.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

Advertisement

ಮತ್ತೊಂದೆಡೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಅಮ್ಮತ್ತಿ, ಸಿದಾಪುರ ಭಾಗದಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ರೈತರು ಬೆಳೆದ ಭತ್ತ, ಕಾಫಿ, ತೆಂಗು, ಬಾಳೆ, ಅಡಕೆ ಸೇರಿದಂತೆ ಇತರ ಕೃಷಿ ಫಸಲುಗಳನ್ನು ಕಾಡಾನೆಗಳು ತುಳಿದು, ತಿಂದು ನಾಶ ಮಾಡುವ ಮೂಲಕ ಭಾರೀ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿವೆ.

ರಾತ್ರಿ ಮಾತ್ರವಲ್ಲದೆ, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳ ಹಿಂಡಿನ ಭಯದಿಂದ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕ್ ಹಾಗೂ ಕೈ ಸಾಲ ಮಾಡಿ ಬೆಳೆಸಿದ ಕೃಷಿಯನ್ನು ಕಾಡಾನೆಗಳು ತುಳಿದು ತಿಂದು ನಾಶ ಮಾಡುವ ಮೂಲಕ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿವೆ.ಇದರಿಂದ ರೈತರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿರುವ ಕೃಷಿಕರು ಸರಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಹೆಚ್ಚಿನ ಮೊತ್ತದಲ್ಲಿ ಪರಿಹಾರ ನೀಡುವ ಮೂಲಕ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 23-02-2024 | ಇಂದು ಕೂಡಾ ಮೋಡ ಹಾಗೂ ಕೆಲವು ಕಡೆ ತುಂತುರು ಮಳೆ |

ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…

23 hours ago

ಹವಾಮಾನ ವರದಿ | 21-02-2025 | ಮೋಡದ ವಾತಾವರಣ | ಇಂದೂ ಕೆಲವು ಕಡೆ ಮಳೆ ಸಾಧ್ಯತೆ |

ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…

3 days ago

ಈ ಬಾರಿ ವರ್ಷದ ಮೊದಲ ಬೇಸಗೆ ಮಳೆ ಕೊಡಗಿನಲ್ಲಿ..!

ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.

4 days ago

ಹವಾಮಾನ ವರದಿ | 20-02-2025 | ಅಧಿಕ ತಾಪಮಾನ- ಕೆಲವು ಕಡೆ ತುಂತುರು ಮಳೆ ಸಾಧ್ಯತೆ | ಫೆ.25 ರಿಂದ ಮೋಡ-ಬಿಸಿಲು |

ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…

4 days ago

ಸ್ವರ್ಗಕ್ಕಾಗಿ ಮೂರು ಕಾಲ್ತುಳಿತಗಳು

ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…

4 days ago

ಅಡಿಕೆಗೆ ಮೈಟ್ | ಆತಂಕ ಬೇಡ, ಇರಲಿ ಎಚ್ಚರ | ವಿಜ್ಞಾನಿಗಳಿಂದ ಮಾಹಿತಿ |

ಅಡಿಕೆಯ ಮೈಟ್‌ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…

4 days ago