Advertisement
ಸುದ್ದಿಗಳು

ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ : ಬೆಳೆಗಾರರಿಗೆ ಸಂಕಷ್ಟ

Share

ಮಡಿಕೇರಿ : ಮಹಾಮಳೆಯ ಪ್ರವಾಹದಿಂದ ಕಂಗೆಟ್ಟಿದ್ದ ದಕ್ಷಿಣ ಕೊಡಗಿನ ರೈತರಿಗೆ ಹಾಗೂ ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂಡು ವಿರಾಜಪೇಟೆ ತಾಲ್ಲೂಕಿನ ವಿವಿಧೆಡೆ ಲಗ್ಗೆ ಇಟ್ಟಿದ್ದು, ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.

ಶ್ರೀಮಂಗಲ ಗ್ರಾ.ಪಂ. ವ್ಯಾಪ್ತಿಯ ಕುರ್ಚಿ ಗ್ರಾಮದ ಎ.ಬಿ. ನಾಚಪ್ಪ ಮತ್ತು ಎ.ಟಿ. ಬೊಳ್ಳಮ್ಮ ಅವರ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡುಗಳು ಫಸಲು ಇರುವ ಕಾಫಿ ಗಿಡಗಳನ್ನು ಬುಡ ಸಹಿತ ತುಳಿದು ಹಾಕಿದೆ, ಅಡಿಕೆ, ಕಾಳು ಮೆಣಸು ಫಸಲನ್ನು ಕೂಡ ನಾಶ ಮಾಡಿವೆ.ಅತಿವೃಷ್ಟಿಯಿಂದ ಭಾರೀ ನಷ್ಟ ಉಂಟಾಗಿರುವ ಬೆನ್ನಲ್ಲೇ ಅಳಿದುಳಿದ ಬೆಳೆಯನ್ನು ಕಾಡಾನೆಗಳು ನುಗ್ಗಿ ನಾಶಪಡಿಸುತ್ತಿದ್ದು, ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೆಳೆಗಾರ ಎ.ಬಿ.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ.ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಮತ್ತೊಂದೆಡೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಅಮ್ಮತ್ತಿ, ಸಿದಾಪುರ ಭಾಗದಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ. ಕೃಷಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ರೈತರು ಬೆಳೆದ ಭತ್ತ, ಕಾಫಿ, ತೆಂಗು, ಬಾಳೆ, ಅಡಕೆ ಸೇರಿದಂತೆ ಇತರ ಕೃಷಿ ಫಸಲುಗಳನ್ನು ಕಾಡಾನೆಗಳು ತುಳಿದು, ತಿಂದು ನಾಶ ಮಾಡುವ ಮೂಲಕ ಭಾರೀ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿವೆ.

ರಾತ್ರಿ ಮಾತ್ರವಲ್ಲದೆ, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳ ಹಿಂಡಿನ ಭಯದಿಂದ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕ್ ಹಾಗೂ ಕೈ ಸಾಲ ಮಾಡಿ ಬೆಳೆಸಿದ ಕೃಷಿಯನ್ನು ಕಾಡಾನೆಗಳು ತುಳಿದು ತಿಂದು ನಾಶ ಮಾಡುವ ಮೂಲಕ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿವೆ.ಇದರಿಂದ ರೈತರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿರುವ ಕೃಷಿಕರು ಸರಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಹೆಚ್ಚಿನ ಮೊತ್ತದಲ್ಲಿ ಪರಿಹಾರ ನೀಡುವ ಮೂಲಕ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

5 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

13 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

16 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

21 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

2 days ago