Advertisement
ಸುದ್ದಿಗಳು

ದಕ್ಷಿಣ ಕೊಡಗಿನಲ್ಲಿ ಮುಂದುವರಿದ ಮಳೆ ಆತಂಕ

Share

ಮಡಿಕೇರಿ :ಕಳೆದ ಕೆಲವು ದಿನಗಳಿಂದ ಕೊಡಗಿನಾದ್ಯಂತ ಮತ್ತೆ ಪ್ರವಾಹದ ಆತಂಕ ಸೃಷ್ಟಿಸಿದ್ದ ಮಳೆಯ ಆರ್ಭಟ ಕೊಂಚ ಕಡಿಮೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ ಮಳೆ ಶಾಂತವಾಗಿದ್ದರೆ ಸೋಮವಾರಪೇಟೆ ಹಾಗೂ ವಿರಾಜಪೇಟೆ ತಾಲೂಕಿನಲ್ಲಿ ಉತ್ತಮ ಮಳೆಯಾಗುತ್ತಿದೆ.

ದಕ್ಷಿಣ ಕೊಡಗಿನ ಭಾಗಗಳಲ್ಲಿ ಭಾರೀ ಮಳೆಯಿಂದ ಲಕ್ಷ್ಮಣತೀರ್ಥ ಮತ್ತು ಕೇರಳದತ್ತ ಸಾಗುವ ಬರಪ್ಪೊಳೆ ಉಕ್ಕಿ ಹರಿಯುತ್ತಿದ್ದು ಗ್ರಾಮೀಣರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಡಿಕೇರಿಯಲ್ಲಿ ಶುಕ್ರವಾರ ತಿಳಿ ಬಿಸಿಲಿನ ವಾತಾವರಣ ಕಂಡು ಬಂದಿತ್ತಾದರೂ ಸೋಮವಾರಪೇಟೆಯಲ್ಲಿ ಬಿಸಿಲು ಕಾಣದೆ ವಾರವೇ ಕಳೆದಿದೆ.

ಕಾವೇರಿಯ ಉಗಮ ಸ್ಥಾನ ತಲಕಾವೇರಿ ಮತ್ತು ಭಾಗಮಂಡಲ ವ್ಯಾಪ್ತಿಯಲ್ಲಿ ಕಳೆದೊಂದು ದಿನದ ಅವಧಿಯಲ್ಲಿ 4 ಇಂಚು ಮಳೆ ದಾಖಲಾಗಿದೆ. ಶುಕ್ರವಾರ ಮಳೆಯ ತೀವ್ರತೆ ಇಳಿಮುಖಗೊಂಡು ಮಡಿಕೇರಿ ರಸ್ತೆಯ ಮೇಲೆ ಹರಿಯುತ್ತಿದ್ದ ಪ್ರವಾಹದ ನೀರು ಇಳಿದು ಸಂಚಾರ ಪುನರಾರಂಭಗೊಂಡಿದೆ. ನಾಪೋಕ್ಲು ರಸ್ತೆಯಲ್ಲಿ ಪ್ರವಾಹದ ನೀರು ಇನ್ನಷ್ಟೆ ಇಳಿಯಬೇಕಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ನಿನ್ನೆ ಬೆಳಗ್ಗಿನಿಂದ ಇಂದು ಬೆಳಗ್ಗಿನವರೆಗೆ ಒಂದು ಇಂಚು ಮಳೆ ದಾಖಲಾಗಿದ್ದರೆ, ಕಾವೇರಿ ನದಿ ಪಾತ್ರದ ನಾಪೋಕ್ಲು, ಮೂರ್ನಾಡು ಬಲಮುರಿ, ಸಿದ್ದಾಪುರ ವಿಭಾಗಗಲ್ಲಿ ಅಲ್ಪಸ್ವಲ್ಪ ಮಳೆಯಷ್ಟೆ ಆಗುತ್ತಿರುವ ಬಗ್ಗೆ ವರದಿಯಾಗಿದೆ. ವೀರಾಜಪೇಟೆ ತಾಲೂಕಿನ ಗೋಣಿಕೊಪ್ಪ, ಪೊನ್ನಂಪೇಟೆಗಳಲ್ಲಿ ಮಳೆ ಕ್ಷೀಣಿಸಿದ್ದರೆ, ಬಾಳೆಲೆ, ಹುದಿಕೇರಿ, ಶ್ರೀಮಂಗಲ ವಿಭಾಗಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದೆ. ಲಕ್ಷ್ಮಣ ತೀರ್ಥ ನದಿಯ ನೀರಿನ ಮಟ್ಟ ಹೆಚ್ಚುತ್ತಿದ್ದು, ಗದ್ದೆ ಬಯಲುಗಳು ಪ್ರವಾಹದಿಂದ ಆವೃತ್ತವಾಗಿದೆ. ಬರಪ್ಪೊಳೆಯಲ್ಲೂ ನೀರು ಉಕ್ಕಿ ಹರಿಯುತ್ತಿದೆ. ಸಿದ್ದಾಪುರದ ಕರಡಿಗೋಡು ವ್ಯಾಪ್ತಿಯ ರಸ್ತೆಗಳು ಜಲಾವೃತಗೊಂಡಿವೆ.
ಸೋಮವಾರಪೇಟೆಯ ಪುಷ್ಪಗಿರಿ ತಪ್ಪಲಿನ ಶಾಂತಳ್ಳಿ ವಿಭಾಗದಲ್ಲಿ ನಿರಂತರ ಮಳೆಯಾಗುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಡಿಕೆ ಮಾರುಕಟ್ಟೆ- ಸದ್ಯ ಮಾರುಕಟ್ಟೆ ಸ್ಥಿರ | ರಬ್ಬರ್‌ ಧಾರಣೆ ಇಳಿಕೆಯ ಹಾದಿ

ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳಲ್ಲಿ ಇಂದು ಬೆಲೆಗಳು ಸಾಮಾನ್ಯವಾಗಿ ಸ್ಥಿರವಾಗಿದ್ದು, ಉತ್ತಮ ಗುಣಮಟ್ಟದ…

4 hours ago

ಹವಾಮಾನ ವರದಿ | 07-03-2026 | ಕರಾವಳಿಯಲ್ಲಿ ಮೋಡ–ಮಳೆಯ ಸುಳಿವು | ಜೋರು ಮಳೆಯ ಲಕ್ಷಣವಿಲ್ಲ

ಕರಾವಳಿ ಜಿಲ್ಲೆಗಳಲ್ಲಿ ಮೋಡ ಹಾಗೂ ಸೆಖೆಯ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಸಂಜೆ ಅಥವಾ…

5 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ

ಮ್ಯಾನ್ಮಾರ್‌ನಿಂದ ಅಡಿಕೆ ಕಳ್ಳಸಾಗಣೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮಿಜೋರಾಂ ಸರ್ಕಾರ ಜಾರಿ ಕ್ರಮವನ್ನು ಕಠಿಣಗೊಳಿಸಿದೆ.…

7 hours ago

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..

16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ಬಳಕೆಯನ್ನು ನಿಷೇಧಿಸುವ ಮಹತ್ವದ ಘೋಷಣೆ ರಾಜ್ಯ…

11 hours ago

ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ

ಕುಕ್ಕೆ ಸುಬ್ರಹ್ಮಣ್ಯ ಮತ್ತು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಗಳಿಗೆ ಅಭಿವೃದ್ಧಿ ಪ್ರಾಧಿಕಾರ ರಚಿಸುವ ಮಹತ್ವದ…

11 hours ago

ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು

ರಾಜ್ಯ ಬಜೆಟ್‌ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…

22 hours ago