ಸಂಪಾಜೆ: ಮಡಿಕೇರಿ ವಿಭಾಗದ ಸಂಪಾಜೆ ವಲಯದ ದಬ್ಬಡ್ಕ ಉಪವಲಯ ಇಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವಪರಿಸರ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ಪರಿಸರದ ಮೇಲೆ ಹೆಚ್ಚಿನ ಆಸಕ್ತಿಯನ್ನು ಬೆಳೆಸುವ ಸಲುವಾಗಿ ಚಿತ್ರಕಲೆ, ಪ್ರಬಂಧ, ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಉಪವಲಯ ಅರಣ್ಯಾಧಿಕಾರಿಗಳು ಪರಿಸರ ರಕ್ಷಣೆ ನಮ್ಮೆಲ್ಲರ ಕರ್ತವ್ಯ ಹೆಚ್ಚು ಹೆಚ್ಚು ಗಿಡ ನೆಡುವುದರೊಂದಿಗೆ ಪರಿಸರವನ್ನು ಬೆಳೆಸಿ ಸಂರಕ್ಷಿಸಬೇಕೆಂದು ಕರೆನೀಡಿದರು.
ಕಾರ್ಯಕ್ರಮದಲ್ಲಿ ಎಸ್.ಡಿ.ಎಂ.ಸಿ ಅಧ್ಯಕ್ಷ ಭವಾನಿಶಂಕರ ಮಾತನಾಡಿ ಪರಿಸರ ಬಗ್ಗೆ ಮಕ್ಕಳಿಗೆ ಪೋಷಕರು ಹೆಚ್ಚಿನ ರೀತಿಯಲ್ಲಿ ಪೋತ್ಸಾಹ ನೀಡಬೇಕು ಎಂದು ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪವಲಯ ಅರಣ್ಯಾಧಿಕಾರಿ ಪಿ.ಜೆ ರಾಘವ, ಬಸವರಾಜ ಎಸ್.ಹೆಚ್, ಅರಣ್ಯರಕ್ಷಕ ರಾದ ಜೋಯಪ್ಪ ಕೆ.ಪಿ, ಪುನೀತ್, ಎಂ.ಎಸ್ ಸಿಬ್ಬಂದಿಗಳಿಂದ ಕಾರ್ತಿಕ್ ಕೂಸಪ್ಪ, ರವೀಂದ್ರ ವೆಂಕಟರಮಣ ಶಂಕರ ಹಾಗೂ ಊರಿನ ನಾಗರಿಕರು ಪಾಲ್ಗೊಂಡಿದ್ದರು.
ಭಾರತದಾದ್ಯಂತ ಮುಂಗಾರು ಸಕ್ರಿಯವಾಗಿದೆ. ಈ ಬಾರಿ ಉತ್ತಮ ಮುಂಗಾರು ಮಳೆಯಾಗುತ್ತಿದೆ. ಸದ್ಯ ಸಾಮಾನ್ಯ…
ಬೆಳೆಗಳಿಗೆ ಔಷಧಿ ಸಿಂಪಡಣೆ ವೇಳೆ ಹೆಚ್ಚಿನ ದಕ್ಷತೆ ಹಾಗೂ ಪರಿಣಾಮಕಾರಿಯಾಗುವ ಉದ್ದೇಶದಿಂದ ವಿವಿಧ…
ಆರೋಗ್ಯವು ಜೀವನದ ಪ್ರಮುಖ ಅಂಗವಾಗಿದೆ, ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳ ಸ್ಥಾನವು…
ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿದಂತೆ ಆಕ್ಸಿಯಮ್-4 ಮಿಷನ್ನ ನಾಲ್ವರು ಗಗನಯಾತ್ರಿಗಳನ್ನು ಒಳಗೊಂಡ…
ರಾಜ್ಯದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಭಕ್ತರ ಅನುಕೂಲಕ್ಕಾಗಿ ಮಂತ್ರಾಲಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಸತಿ…
ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಹೃದಯಾಘಾತ ಪ್ರಕರಣಗಳ ಕುರಿತು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು…