ವಿಶೇಷ ವರದಿಗಳು

“ದಮ್ಮಯ್ಯ ರಸ್ತೆ ಸರಿಪಡಿಸಿ ” – ಇದು ಗುತ್ತಿಗಾರಿನಲ್ಲಿ ಕಂಡ ಚೀಟಿ….! ವ್ಯವಸ್ಥೆಗೆ ಹಿಡಿದ ಕೈಗನ್ನಡಿ ಇದು…!

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುತ್ತಿಗಾರು: “ನಿಮಗೆ ಮತ ನೀಡಿ ಜನಪ್ರತಿನಿಧಿಗಳನ್ನಾಗಿ ಮಾಡಿದ್ದೇವೆ. ಈ ಪ್ರಮಾದ ಮರುಕಳಿಸದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮದು.ಆದರೆ ಇದೊಂದು ಬಾರಿ ತೀರಾ ಹದಗೆಟ್ಟ ರಸ್ತೆಯನ್ನು  ಸರಿಪಡಿಸಿ.. ನಿಮ್ಮ ದಮ್ಮಯ್ಯ….”  ಇದು ಗುತ್ತಿಗಾರು ಬಳಿಯ ಚತ್ರಪ್ಪಾಡಿಯಲ್ಲಿ  ಕಂಡುಬಂದ ಪತ್ರ. 

Advertisement
Advertisement
ಇದು ಚತ್ರಪ್ಪಾಡಿಯಲ್ಲಿ ರಸ್ತೆಯ ಈಗಿನ ಸ್ಥಿತಿ

ಇಂತಹದ್ದೊಂದು ದಯನೀಯ ಸ್ಥಿತಿ ಯಾವ ಮತದಾರರಿಗೂ ಬರಬಾರದು. ಕಳೆದ ಸುಮಾರು 10 ವರ್ಷಗಳ ಬೇಡಿಕೆ ಇನ್ನೂ ಈಡೇರಿಲ್ಲ….!. ಒಂದು ರಸ್ತೆ ಅಭಿವೃದ್ಧಿಗೆ ಅದೂ  ಸುಮಾರು 6 ಕಿ ಮೀ ಉದ್ದದ ರಸ್ತೆ…!.  ಇದು ಗುತ್ತಿಗಾರು-ಕಮಿಲ-ಬಳ್ಪ ರಸ್ತೆಯ ಅವ್ಯವಸ್ಥೆ. ಇದೀಗ ಗುತ್ತಿಗಾರಿನಿಂದ ಕಮಿಲ ಬಳ್ಪ ರಸ್ತೆಯಾಗಿ ತೆರಳುವ ಚತ್ರಪ್ಪಾಡಿ ಸೇರಿದಂತೆ ವಿವಿದೆಡೆ ವಾಹನದಲ್ಲಿ ಓಡಾಡಲೇ ಸಾಧ್ಯವಾಗದ ಸ್ಥಿತಿ ಇದೆ. ಕಳೆದ ಮಳೆಗಾಲದಿಂದಲೇ ಈ ಅವ್ಯವಸ್ಥೆ ಇದೆ. ಕಳೆದ ಬಾರಿಯೇ ಈ ಬಗ್ಗೆ  ಜನರೇ ಎಚ್ಚರಿಸಿದ್ದರು. ಹೀಗಿದ್ದರೂ 25 ವರ್ಷಗಳಿಂದ ಸುಳ್ಯದ ಶಾಸಕರಾಗಿರುವ ಎಸ್ ಅಂಗಾರ ಅವರು ಗಮನಹರಿಸಿಲ್ಲ ಎನ್ನುವ ಆರೋಪ ಮತದಾರರದ್ದಾರೆ,  ಇದು ಜಿಲ್ಲಾ ಪಂಚಾಯತ್ ರಸ್ತೆ. ಕಳೆದ ಬಾರಿ ಜಿಲ್ಲಾ ಪಂಚಾಯತ್ ಚುನಾವಣೆಯ ಸಮಯದಲ್ಲಿ ಹಾಗೂ ಅದಕ್ಕಿಂತಲೂ ಹಿಂದೆ ಈ ರಸ್ತೆ ದುರಸ್ತಿಗೆ ಬೇಡಿಕೆ ಇತ್ತು. ಹೀಗಿದ್ದರೂ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಸದಸ್ಯರೂ ಗಮನಹರಿಸಿಲ್ಲ. ಈಗಂತೂ ಜಿಲ್ಲಾ ಪಂಚಾಯತ್ ಸದಸ್ಯರು ಯಾರು ಎಂಬ ಪ್ರಶ್ನೆಯನ್ನೇ ಮತದಾರರು ಕೇಳಬೇಕಾದ ಸ್ಥಿತಿ ಬಂದಿದೆ ಎಂದು ರಸ್ತೆ ಬಳಕೆದಾರರು ಮಾತನಾಡುತ್ತಿದ್ದಾರೆ. ಇನ್ನು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಈ ರಸ್ತೆ ಬರುವುದಿಲ್ಲ. ಹೀಗಿದ್ದರೂ ಗ್ರಾಮ ಪಂಚಾಯತ್ ಆಡಳಿತ ತಕ್ಕಮಟ್ಟಿಗೆ ಸ್ಪಂದಿಸಿದೆ, ಆದರೆ ಅನು್ದಾನವಿಲ್ಲದೆ ಏನೂ ಮಾಡಲಾಗದ ಸ್ಥಿತಿಯಲ್ಲಿದೆ. ಹಾಗಿದ್ದರೆ ಈ ರಸ್ತೆಯನ್ನು ಅಭಿವೃದ್ಧಿ ಪಡಿಸಬೇಕಾದವರು ಯಾರು ? ಎಂಬುದು ಮತದಾರರ ಪ್ರಶ್ನೆ. ಈ ಕಾರಣದಿಂದಲೇ ಈಗ ಅಸಹಾಯಕ, ಹತಾಶ ಮತದಾರರು ಬ್ಯಾನರ್ ಅಳವಡಿಸಿದ್ದಾರೆ.

ಒಟ್ಟು ಸುಮಾರು 6 ಕಿಮೀ ಉದ್ದದ ರಸ್ತೆ ಇದು. ಇದರಲ್ಲಿ ಈಗಾಗಲೇ ಸುಮಾರು 1.5 ಕಿಮೀ ಉದ್ದದ ರಸ್ತೆ ಅಭಿವೃದ್ಧಿಯಾಗಿದೆ. ಶಾಸಕರು ಅನುದಾನ ನೀಡಿದ್ದಾರೆ. ಈಗ ಉಳಿದಿರುವುದು  ಕೇವಲ 4.5 ಕಿಮೀ ರಸ್ತೆ. ಇದರಲ್ಲೂ ಸುಮಾರು 90 ಮೀಟರ್ ಈಗ ಕಾಂಕ್ರೀಟೀಕರಣಕ್ಕೆ ಅನುದಾನ ಲಭ್ಯವಾಗಿದೆ. ಇಡೀ ರಸ್ತೆ ಡಾಮರೀಕರಣಕ್ಕೆ ಕಳೆದ ವರ್ಷ ಇಲಾಖೆಯೇ ನೀಡಿದ ಅಂದಾಜುಪಟ್ಟಿಯಂತೆ 70 ಲಕ್ಷ ರೂಪಾಯಿ ಬೇಕಾಗಿದೆ. ಅನುದಾನ ಲಭ್ಯವಾದರೆ ರಸ್ತೆ ಅಭಿವೃದ್ಧಿ ಮಾಡಬಹುದು  ಎಂದು ಇಲಾಖೆ ಹೇಳಿದೆ. ಹಾಗಿದ್ದರೂ ಅನುದಾನ ಲಭ್ಯವಾಗಿಲ್ಲ. 2019 ರ ಡಿಸೆಂಬರ್ ಅವಧಿಗೆ ಈ ಭಾಗದ ಜನರು ರಸ್ತೆ ದುರಸ್ಥಿಗೆ ಒತ್ತಾಯ ಮಾಡಿದಾಗ 80 ಲಕ್ಷ ರೂಪಾಯಿ ಅನುದಾನ ಬಿಡುಗಡೆಯಾಗಿದ್ದು ಡಿಸೆಂಬರ್ ಅಂತ್ಯದಲ್ಲಿ ಟೆಂಡರ್ ಪ್ರಕ್ರಿಯೆ ನಡೆಯಲಿದೆ, ನಂತರ ಕಾಮಗಾರಿ ನಡೆಯಲಿದೆ ಎಂಬ ಭರವಸೆ ಇಲಾಖೆಯಿಂದಲೂ ಜನಪ್ರತಿನಿಧಿಗಳಿಂದಲೂ ಲಭ್ಯವಾಗಿತ್ತು. ಆದರೆ ಈಗ 2020 ಜನವರಿ ಅಂತ್ಯವಾದರೂ ಟೆಂಡರ್ ಆಗಿರುವ ಬಗ್ಗೆ ಮಾಹಿತಿ ಇಲ್ಲ…!. ಈ ರಸ್ತೆ ಮೇಲ್ದರ್ಜೆಗೇರುವ ಬಗ್ಗೆ ಆಗಾಗ ಹೇಳಲಾಗುತ್ತಿದೆ. 2016 ರಿಂದಲೇ ಈ ಪ್ರಸ್ತಾವನೆ ಇದ್ದು ಇಂದಿಗೂ ಅದೇ ಸ್ಥಿತಿಯಲ್ಲಿದೆ ಎಂದು ಇಲಾಖೆಯ ಮೂಲಗಳು ಹೇಳುತ್ತವೆ…!.

ಈ ರಸ್ತೆಯಲ್ಲಿ ತೆರಳುವ ವಾಹನ

ಯಾಕಿಷ್ಟು ಅವಸರ , ತಾಲೂಕಿನಲ್ಲಿ  ಒಂದೇ ರಸ್ತೆಯಲ್ಲ ಎಂಬ ಪ್ರಶ್ನೆ ಜನಪ್ರತಿನಿಧಿಗಳು ಸಹಜವಾಗಿಯೇ ಕೇಳುತ್ತಾರೆ. ಈ ರಸ್ತೆ ಎರಡು ಪ್ರಮುಖ ರಾಜ್ಯ ಹೆದ್ದಾರಿಗಳನ್ನು ಸಂಪರ್ಕಿಸುವ ಹಾಗೂ ಕುಕ್ಕೆ ಸುಬ್ರಹ್ಮಣ್ಯದಲ್ಲಿ ರಸ್ತೆ ಬಂದ್ ಆದಾಗ ಇದೇ ರಸ್ತೆ ಮೂಲಕ ವಾಹನಗಳು ಓಡಾಟ ನಡೆಸುತ್ತಿದೆ. ಮತದಾರರೂ ಈಗ ಯೋಚಿಸುತ್ತಿದ್ದಾರೆ ಕಳೆದ ಬಾರಿ ಲೋಕಸಭಾಚುನಾವಣೆ ಹಾಗೂ ಅದಕ್ಕೂ ಮುನ್ನ ಚುನಾವಣೆಯ ಸಮಯದಲ್ಲಿ  ಚುನಾವಣೆಯ ನೀತಿ ಸಂಹಿತೆ ಕಾರಣದಿಂದ ರಸ್ತೆ ದುರಸ್ತಿಯಾಗುವುದಿಲ್ಲ, ಚುನಾವಣೆ ಮುಗಿದ ನಂತರ ಆಗುತ್ತದೆ ಎಂಬ ಭರವಸೆ ನೀಡಿದ್ದರು. ಅಂತಹ ಚುನಾವಣೆ 3 ಮುಗಿದರೂ ರಸ್ತೆ ಮಾತ್ರಾ ಹಾಗೆಯೇ ಉಳಿದುಕೊಂಡಿದೆ. ಏಕೆಂದರೆ ಲೋಕಸಭಾ ಚುನಾವಣೆಯ ನಂತರ 1 ಕೋಟಿ ರೂಪಾಯಿಯಲ್ಲಿ  ಈಗ ಕಮಿಲದಿಂದ ಬಳ್ಪದವರೆಗೆ ರಸ್ತೆ ದುರಸ್ತಿಯಾಗಬೇಕಿತ್ತು….! ಇಂದಿಗೂ ರಸ್ತೆ ಸ್ಥಿತಿ ಹಾಗೆಯೇ ಇದೆ. ಅಂದು ಹೇಳಿದವರು ಈಗ ಮೌನವಾಗಿದ್ದಾರೆ… ಆಗುತ್ತದೆ ಎಂದಷ್ಟೇ ಹೇಳುತ್ತಾರೆ…! . ಆದರೆ ಜನರೇ ಹಲವು ಬಾರಿ ಶ್ರಮದಾನದ ಮೂಲಕ ದುರಸ್ತಿ ಮಾಡಿದರು.

Advertisement

ಇನ್ನೀಗ ಗ್ರಾಮ ಪಂಚಾಯತ್ ಚುನಾವಣೆ ಹತ್ತಿರವಾಗುತ್ತಿದೆ. ಚುನಾವಣೆ ಘೊಷಣೆಯಾದ ತಕ್ಷಣವೇ ನೀತಿ ಸಂಹಿತೆ ಜಾರಿಗೆ ಬರುತ್ತದೆ. ಯಾವುದೇ ಟೆಂಡರ್ ಹಾಗೂ ಅಭಿವೃದ್ಧಿ ಕೆಲಸಗಳಿಗೆ ವೇಗ ಸಿಗುವುದಿಲ್ಲ. ಚುನಾವಣೆ ಮುಗಿಯುವ ಹೊತ್ತಿಗೆ ಮಳೆ ಆರಂಭವಾಗುತ್ತದೆ , ಹೀಗಾಗಿ ಈ ಬಾರಿಯೂ ರಸ್ತೆ ಅಭಿವೃದ್ಧಿ ನೆನೆಗುದಿಗೆ ಬೀಳದಂತೆ ಮತದಾರರೇ ಎಚ್ಚರಿಕೆ ವಹಿಸಿದ್ದಾರೆ. ರಸ್ತೆಯಲ್ಲಿ  ಈ ಬಾರಿ ಯಾವುದೇ ರಾಜಕೀಯ ಇಲ್ಲದೆ ಒಂದಾಗುವ ಬಗ್ಗೆ ಚರ್ಚೆ ನಡೆಸಿದ್ದಾರೆ.

ಸುಮಾರು 10 ವರ್ಷಗಳಿಂದ ಮತದಾರರ ಬೇಡಿಕೆ ಇದ್ದರೂ ಏಕೆ ಅಧಿಕಾರಿಗಳು, ಜನಪ್ರತಿನಿಧಿಗಳು ಆಸಕ್ತಿ ತೋರುತ್ತಿಲ್ಲ ಎಂಬುದು ಯಕ್ಷ ಪ್ರಶ್ನೆ. ಕೊನೆಯ ಬೇಡಿಕೆಯಾಗಿ ಈಗ ದಮ್ಮಯ್ಯ ಹಾಕಿದ್ದಾರೆ. ಈಗಲಾದರೂ ಇಲಾಖೆಗಳು, ಜನಪ್ರತಿನಿಧಿಗಳು ಎಚ್ಚೆತ್ತುಕೊಳ್ಳುತ್ತಾರಾ ?

 

 

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಎಳೆ ಅಡಿಕೆ ಬೀಳಲು ಹವಾಮಾನ ವೈಪರೀತ್ಯ ಕಾರಣವೇ…!?

ಅಡಿಕೆ ಬೆಳೆಗಾರರಿಗೆ ಜೂನ್‌ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…

20 minutes ago

ಅಹಮದಾಬಾದ್ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ

ಅಹಮದಾಬಾದ್ ನಲ್ಲಿ  ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…

43 minutes ago

ಮುಂದಿನ 1 ತಿಂಗಳು ಈ 4 ರಾಶಿಯವರಿಗೆ ಸೂರ್ಯನಿಂದ ಬ್ಯಾಡ್‌ ಟೈಮ್

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690

52 minutes ago

ಹೊಸರುಚಿ | ಹಲಸಿನ ಹಣ್ಣಿನ ಮೈಸೂರು ಪಾಕ್

ಹಲಸಿನ ಹಣ್ಣಿನ ಮೈಸೂರು ಪಾಕ್

59 minutes ago

ಅಕ್ರಮವಾಗಿ ಅಡಿಕೆ ಸಾಗಾಟ | ಮಿಜೋರಾಂನಲ್ಲಿ 386 ಚೀಲ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು

ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…

11 hours ago

ಹವಾಮಾನ ವರದಿ | 13-06-2025 | ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ | ಜೂ.19 ರಿಂದ ಮಳೆಯ ಪ್ರಮಾಣ ಕಡಿಮೆ ಸಾಧ್ಯತೆ |

ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…

18 hours ago