ಕಾರ್ಯಕ್ರಮಗಳು

ದಮ್ಮಾಮ್: ಇಂಡಿಯನ್ ಸೋಷಿಯಲ್ ಫೋರಂ ವತಿಯಿಂದ ಅಭೂತ ಪೂರ್ವ ಕನ್ನಡ ರಾಜ್ಯೋತ್ಸವ ಆಚರಣೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ದಮ್ಮಾಮ್: “ಭಾರತ ವಿವಿಧ ಜಾತಿ, ಧರ್ಮ, ಭಾಷೆ, ಮತ್ತು ಸಂಸ್ಕೃತಿಗೆ ತಾಯ್ನೆಲವಾಗಿದೆ. ಸ್ವಾತಂತ್ರ್ಯೋತ್ತರ  1950ರ ದಶಕದಲ್ಲಿ ರಾಜ್ಯ ರಚನೆಯ ವಿಷಯ ಪ್ರಸ್ತಾಪವಾದಾಗ ಆಯಾ ರಾಜ್ಯಗಳಲ್ಲಿ ಭಾಷಾವಾರು ವಿಂಗಡಣೆಗಾಗಿ ಚಳುವಳಿಗಳು ನಡೆದು ಭಾಷೆಯ ಆಧಾರದಲ್ಲಿ ರಾಜ್ಯಗಳು ಸ್ಥಾಪನೆಯಾದವು. ಆದರೆ ಇಂದು ದೇಶದಲ್ಲಿ ಭಾಷಾ ವೈವಿಧ್ಯತೆಯನ್ನು ನಾಶ ಪಡಿಸಿ  ಏಕ ಭಾಷೆ, ಏಕಸಂಸ್ಕೃತಿಯನ್ನು ಹೇರುವಂತಹ ಪ್ರಯತ್ನಗಳು ನಡೆಯುತ್ತಿದ್ದು, ನಾವೆಲ್ಲರೂ ಒಕ್ಕೊರಲಿನ ದನಿಯೊಂದಿಗೆ ಇದನ್ನು ವಿರೋಧಿಸಬೇಕಾಗಿದೆ” ಎಂದು ಇಂಡಿಯನ್ ಸೋಶಿಯಲ್ ಫಾರಂ ಕರ್ನಾಟಕ ಇದರ ಪೂರ್ವ ಪ್ರಾಂತ್ಯದ ಅಧ್ಯಕ್ಷ ಮುಹಮ್ಮದ್ ಷರೀಫ್ ಜೋಕಟ್ಟೆ ತಿಳಿಸಿದರು.

Advertisement
Advertisement

ಅವರು ಕೆ.ಎಂ.ಟಿ. ಹಾಗೂ ಅಡ್ವಾನ್ಸಡ್ ಬ್ಲೂ ಲೈನ್ (ಎ. ಬಿ. ಎಲ್. ಗ್ರೂಪ್) ಪ್ರಾಯೋಜಕತ್ವದೊಂದಿಗೆ ಇಂಡಿಯನ್ ಸೋಷಿಯಲ್ ಫಾರಂ ವತಿಯಿಂದ, ರಾಯಲ್ ಝಯ್ಕಾ ರೆಸ್ಟೋರೆಂಟ್ ಸಭಾಂಗಣದಲ್ಲಿ ನ.1ರಂದು ಆಯೋಜಿಸಲಾಗಿದ್ದ  ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡುತ್ತಿದ್ದರು.

“ಭಾರತದ ಸಾಮಾಜಿಕ, ಆರ್ಥಿಕ, ರಾಜಕೀಯ, ಕಲೆ ಮತ್ತು ಸಾಹಿತ್ಯ ಕ್ಷೇತ್ರಗಳಿಗೆ ಅಗಾಧ ಕೊಡುಗೆಯನ್ನು ಕರ್ನಾಟಕ ನೀಡಿದೆ. ಕರ್ನಾಟಕ ಏಕೀಕರಣ ಚಳುವಳಿಯ ನಾಯಕರ  ಪ್ರಯತ್ನದಿಂದಾಗಿ ಕರ್ನಾಟಕ ಹುಟ್ಟಿಕೊಂಡಿತು” ಎಂದರು. ಸೌದಿ ಅರೇಬಿಯಾದಲ್ಲಿರುವ ಅನಿವಾಸಿ ಭಾರತೀಯರ ಮಕ್ಕಳು ಇಂಗ್ಲಿಷ್ ಭಾಷೆಯಲ್ಲಿ ಕಲಿಯುವುದರಿಂದಾಗಿ ಕನ್ನಡದಿಂದ ದೂರವುಳಿಯುತ್ತಿದ್ದಾರೆ. ನಾವು ಎಲ್ಲೇ ಹೋದರೂ ನಮ್ಮ  ಮಾತೃ ಭಾಷೆಯನ್ನು ಮರೆಯಕೂಡದು. ‘ನೀನು ಇಂಗ್ಲಿಷ್ ಭಾಷೆಯನ್ನು ಕಲಿ. ಆದರೆ ಅದನ್ನು ಕನ್ನಡದಲ್ಲಿ ಕಲಿ’ ಎಂಬ ಯು. ಆರ್. ಅನಂತ ಮೂರ್ತಿಯವರ ಉಕ್ತಿಯನ್ನು ನಾವು ಅಳವಡಿಸಿಕೊಳ್ಳಬೇಕು” ಎಂದು ಅವರು  ಕಿವಿ ಮಾತು ಹೇಳಿದರು. ಕರ್ನಾಟಕ ಏಕೀಕರಣ ಚಳುವಳಿಯ ಚುಟುಕು ಇತಿಹಾಸವನ್ನು ವಿವರಿಸಿದ ಅವರು ಅನಿವಾಸಿ ಭಾರತೀಯರಲ್ಲಿ ಕನ್ನಡವನ್ನು ಪ್ರಚುರಪಡಿಸುವ ತನ್ನ ಪ್ರಯತ್ನವನ್ನು ಐ ಎಸ್ ಎಫ್ ಮುಂದುವರಿಸಲಿದೆ ಎಂದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ ರಾಯಲ್ ಝಯ್ಕಾ ಉಪಹಾರ ಗೃಹದ ಸತೀಶ್ ಕುಮಾರ್ ಮಾತನಾಡಿ ದೇಶದಲ್ಲಿ ಹಿಂದಿ ಹೇರಿಕೆಯ ಪ್ರಯತ್ನವನ್ನು ವಿಫಲಗೊಳಿಸಬೇಕು ಮತ್ತು ಕರುನಾಡ ನೈಜ ಜಾತ್ಯತೀತತೆಯನ್ನು ಮರಳಿ ಪಡೆಯಲು ಪಣ ತೊಡಬೇಕು ಎಂದು ಕರೆ ನೀಡಿದರು.

Advertisement

ಇನ್ನೋರ್ವ ಮುಖ್ಯ ಅತಿಥಿ ಇಂಡಿಯಾ ಫ್ರಾಟರ್ನಿಟಿ ಫೋರಂನ ಪೂರ್ವ ವಲಯ ಜಿಲ್ಲಾಧ್ಯಕ್ಷ ಅತಾವುಲ್ಲಾ ಉಚ್ಚಿಲ ಮಾತನಾಡುತ್ತ, ಪ್ರಾಂತೀಯ ಭಾಷಾ ಪ್ರೇಮದೊಂದಿಗೆ ವಿವಿಧತೆಯಲ್ಲಿ ಏಕತೆಯನ್ನು ಕಾಣಲು ಸಾಧ್ಯವಾಗಬೇಕು ಎಂದು ನುಡಿದರು.

ಸಮಾರಂಭದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿದ್ದು , ಈ ವೇಳೆ ಕನ್ನಡದ ಇತಿಹಾಸವನ್ನು ಆಧರಿಸಿದ ಕಿರು ಪ್ರಹಸನಗಳು ನೆರೆದವರ ಮನಸೂರೆಗೊಳಿಸಿತು. ಐ.ಎಸ್.ಎಫ್ ಜುಬೈಲ್ ತಂಡವು ಕರ್ನಾಟಕದ ಐತಿಹಾಸಿಕ ವ್ಯಕ್ತಿಗಳನ್ನು ನೆನಪಿಸುತ್ತಾ ನಡೆಸಿದ ಸ್ವಾಗತ ಶೈಲಿಯು ಅತ್ಯಾಕರ್ಷಕ ವಾಗಿತ್ತು. ಕರ್ನಾಟಕದ ಪ್ರಮುಖ ಇತಿಹಾಸ ಪುರುಷರಾದ ರಾಷ್ಟ್ರ ಕವಿ ಕುವೆಂಪು, ಕಿತ್ತೂರು ಚೆನ್ನಮ್ಮ, ಹಾಗೂ ಕರ್ನಾಟಕ ದ ಪುರಾತನ ಕಲೆಯಾದ ಕುಂಬಾರನ ವೇಷ ಧರಿಸಿ ವೇದಿಕೆಯಲ್ಲಿ ಹೆಜ್ಜೆ ಇಟ್ಟ ಪುಟಾಣಿ ಮಕ್ಕಳು ಆಕರ್ಷಣೆಯ ಕೇಂದ್ರ ಬಿಂದುವಾದರು.

ಕಾರ್ಯಕ್ರಮದಲ್ಲಿ ಕರ್ನಾಟಕದ ಇತಿಹಾಸ ಮತ್ತು ಕನ್ನಡ ಭಾಷೆಯ ಕುರಿತ ರಸ ಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಕರ್ನಾಟಕದ ಇತಿಹಾಸವನ್ನು ತಿಳಿಸುವ ಚಿತ್ರ ಮತ್ತು ಬರಹಗಳ ಪ್ರದರ್ಶನವನ್ನು ಏರ್ಪಡಿಸಲಾಗಿತ್ತು. ಸಮಾರಂಭಕ್ಕೆ ಬರುವ ಕನ್ನಡಾಭಿಮಾನಿಗಳಿಗೆ ಸ್ವಾಗತ ಕೋರುತ್ತಾ ನಿಂತಿರುವ ರೈತರ ನೇಗಿಲ ಯೋಗಿಯ ಸ್ತಬ್ಧಚಿತ್ರ ಎಲ್ಲರ ಗಮನ ಸೆಳೆಯಿತು.

ಐ.ಎಸ್. ಎಫ್. ಪ್ರತಿ ವರ್ಷ ನಡೆಸಿಕೊಂಡು ಬರುವ ರಾಜ್ಯೋತ್ಸವ ಸನ್ಮಾನ ಕಾರ್ಯವನ್ನು ಪ್ರಸಕ್ತ ವರ್ಷದಲ್ಲಿ ಶಿಕ್ಷಣಕ್ಷೇತ್ರಕ್ಕೆ ಮೀಸಲಿಟ್ಟಿದ್ದು, ಅದರಂತೆ ಕಳೆದ ಹತ್ತು ವರುಷಗಳಿಂದ ದಮ್ಮಾಮ್ ಭಾರತೀಯ ರಾಯಭಾರಿ ಶಾಲೆಯಲ್ಲಿ ಕರುನಾಡ ಮಕ್ಕಳಿಗೆ ಕನ್ನಡ ಭಾಷಾ ಶಿಕ್ಷಣವನ್ನು ನೀಡುತ್ತಿರುವ ಶಿಕ್ಷಕಿ ಸಂಧ್ಯಾ ಶಿರ್ವರನ್ನು ಐ ಎಸ್ ಎಫ್ ಮಹಿಳಾ ಘಟಕದ ಸದಸ್ಯೆಯರು ಸನ್ಮಾನಿಸಿದರು. `

Advertisement


ಐ ಎಸ್ ಎಫ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಶ್ರಫ್ ಮುಕ್ವೆ, ಎಬಿಎಲ್ ಗ್ರೂಪ್ ನ ಸಿಇಓ ಅಬೂಬಕ್ಕರ್ ಸಿದ್ದೀಕ್, ಕೆಎಂಟಿ ಸಿಇಓ ಅಬ್ದುಲ್ ರಹ್ಮಾನ್, ಐ ಎಸ್ ಎಫ್ ದಮ್ಮಾಮ್ ಘಟಕ ಅಧ್ಯಕ್ಷ ಶಬೀರ್ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಸಮಾರಂಭದ ಮೊದಲಿಗೆ ದಮ್ಮಾಮ್ ಘಟಕ ಕಾರ್ಯದರ್ಶಿ ಸಾಭಿತ್ ಪುತ್ತೂರು ಸ್ವಾಗತಿಸಿ, ಫಾರಂ ಸದಸ್ಯ ಅಬ್ದುಲ್ ಹಮೀದ್ ವಂದಿಸಿದರೆ, ಝಯಿನುದ್ದೀನ್ ಸಜೀಪ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು. ಅನನ್ಯ ರೂಪದಲ್ಲಿ ಸಮಾರಂಭ ನಡೆಸಿದಕ್ಕಾಗಿ ಸಭಿಕರು ಮೆಚ್ಚುಗೆ ವ್ಯಕ್ತಪಡಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಾಮರಾಜನಗರದ ಬೇಡುಗುಳಿ ಬಳಿ ಹುಲಿ ದಾಳಿಗೆ ಮೃತಪಟ್ಟ ಮಹಿಳೆ

ಚಾಮರಾಜನಗರ ತಾಲೂಕು ಬೇಡುಗುಳಿ ಸಮೀಪದ ರಾಮಯ್ಯನ ಪೋಡುವಿನಲ್ಲಿ ಹುಲಿ ದಾಳಿಗೆ ರಂಗಮ್ಮ ಎಂಬ…

13 minutes ago

ರಾಜ್ಯದ ವಿವಿದೆಡೆ ಭಾರೀ ಮಳೆ  ಸಾಧ್ಯತೆ | ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಕರ್ನಾಟಕ ಮತ್ತು ಕರ್ನಾಟಕದ ಒಳನಾಡಿನಲ್ಲಿ  ಭಾರಿ ಮಳೆ ಮತ್ತು ಗುಡುಗು ಸಹಿತ…

27 minutes ago

14 ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳ

ಈಚೆಗೆ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯಲ್ಲಿ…

40 minutes ago

ಸಂಭಾವ್ಯ ಮಳೆ ಅನಾಹುತ ಪ್ರದೇಶಗಳನ್ನು ಗುರುತಿಸಲು ದ ಕ ಜಿಲ್ಲಾಧಿಕಾರಿ ಸೂಚನೆ

ಮಂಗಳೂರು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ನಗರ ಸ್ಥಳೀಯ ಸಂಸ್ಥೆಗಳು ತಮ್ಮ…

1 hour ago

ಹವಾಮಾನ ವರದಿ | 10-06-2025 | ಜೂ.11 ರಿಂದ ರಾಜ್ಯದ ವಿವಿದೆಡೆ ಉತ್ತಮ ಮಳೆಯ ಮುನ್ಸೂಚನೆ

ಜೂನ್ 12ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಉತ್ತಮ ಹಾಗೂ ಕೆಲವು ಭಾಗಗಳಲ್ಲಿ ಭಾರಿ…

8 hours ago

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

14 hours ago