ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.
ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…
ಕರಾವಳಿಯಲ್ಲಿ ಮೋಡದ ವಾತಾವರಣ ಹೆಚ್ಚಾಗಿದ್ದು, ಮಧ್ಯಾಹ್ನದ ನಂತರ ತೀರ ಮತ್ತು ಘಟ್ಟದ ಕೆಳಭಾಗಗಳಲ್ಲಿ…
“ಅರ್ಧ ಎಕರೆ ಇದ್ದರೂ ಕುಟುಂಬ ಜೀವನ ಮಾಡಬಹುದು” ಎನ್ನುವ ರೈತನ ಮಾತು, ಭೂಮಿ…