ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.
ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಇಂಡೋನೇಷ್ಯಾದ ತಾಳೆ ಎಣ್ಣೆ ಕಾರ್ಖಾನೆಗಳ ತ್ಯಾಜ್ಯದಿಂದ ವರ್ಷಕ್ಕೆ 3.6 ಬಿಲಿಯನ್ ಘನ ಮೀಟರ್…
ಎಲ್ ನಿನೋ ಆತಂಕದ ನಡುವೆಯೂ ಭಾರತದಲ್ಲಿ 2026ರ ಖಾರಿಫ್ ಬಿತ್ತನೆ 1,000 ಲಕ್ಷ…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು–ಮೋಡದೊಂದಿಗೆ ಅಲ್ಲಲ್ಲಿ ಮಳೆ ಮುಂದುವರಿಯುವ ಸಾಧ್ಯತೆ…
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…