ಮಂಗಳೂರು: ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲಾಯಿಲಾಮ ಅವರು ಇಂದು ಮಂಗಳೂರಿಗೆ ಆಗಮಿಸಿದರು.
ಗುರುವಾರ ಮಧ್ಯಾಹ್ನ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರನ್ನು ಮಂಗಳೂರು ಉಪವಿಭಾಗಾಧಿಕಾರಿ ರವಿ ಚಂದ್ರ ನಾಯ್ಕ್, ಉಪ ಪೊಲೀಸ್ ಆಯುಕ್ತರಾದ ಅರುಣಾಂಶು ಗಿರಿ,ಲಕ್ಷ್ಮೀ ಗಣೇಶ್ ಅವರು ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು.
ವಿಮಾನ ನಿಲ್ದಾಣದ ಹೊರಗಡೆ ಟಿಬೇಟಿಯನ್ ಸಾಂಪ್ರದಾಯಿಕ ನೃತ್ಯದ ಮೂಲಕವೂ ಅವರನ್ನು ಸ್ವಾಗತಿಸಲಾಯಿತು.ದಲಾಯಿಲಾಮ ಆಗಮನದ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಲ್ಲಿ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿತ್ತು. ನಗರದ ಖಾಸಗಿ ಹೋಟೆಲ್ ನಲ್ಲಿ ತಂಗಿರುವ ಅವರನ್ನು ಭಾರೀ ಭದ್ರತೆ ಯಲ್ಲಿ ಝೀರೋ ಟ್ರಾಫಿಕ್ ನಲ್ಲಿ ವಿಮಾನ ನಿಲ್ದಾಣದಿಂದ ನಗರಕ್ಕೆ ಕರೆ ತರಲಾಯಿತು.
ಮೂರು ದಿನಗಳ ಕಾಲ ಮಂಗಳೂರು ನಗರದಲ್ಲಿ ತಂಗಲಿರುವ ದಲಾಯಿಲಾಮ ಅವರು ಆ. 30 ರಂದು ನಗರದ ಫಾದರ್ ಮುಲ್ಲರ್ ಸಭಾಂಗಣದಲ್ಲಿ ನಡೆಯುವ ನಯನ ಅಖಿಲ ಭಾರತ ಕ್ಯಾಥೊಲಿಕ್ ಶಾಲಾ ಒಕ್ಕೂಟದ ರಾಷ್ಟ್ರೀಯ ಸಮಾವೇಶದಲ್ಲಿ ಭಾಗವಹಿಸುವರು. ಆ.31 ರಂದು ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ.
ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…
ರಾಜ್ಯದಲ್ಲಿ ಮುಂಗಾರು ದುರ್ಬಲವಾಗುತ್ತಿದ್ದು, ಜುಲೈ 11ರಿಂದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿ…
ಜುಲೈ ಮೊದಲ ವಾರದ ಉತ್ತಮ ಮಳೆಯಿಂದ ದೇಶದ ಮಳೆ ಕೊರತೆ 12%ಕ್ಕೆ ಇಳಿದಿದೆ.…
ಇಥೆನಾಲ್ ಮಿಶ್ರಣ ಯೋಜನೆಯಿಂದ ಕಳೆದ ಹತ್ತು ವರ್ಷಗಳಲ್ಲಿ ರೈತರಿಗೆ ₹1.6 ಲಕ್ಷ ಕೋಟಿಗೂ…
ಅಮೆರಿಕ-ಇರಾನ್ ನಡುವಿನ ಕದನ ವಿರಾಮ ಮತ್ತೆ ಮುರಿಯುವ ಹಂತಕ್ಕೆ ತಲುಪಿದ್ದು, ಹೊಸ ಅಮೆರಿಕನ್…
ಗುತ್ತಿಗಾರಿನಲ್ಲಿ ‘ಮಾನ್ಸೂನ್ ಕಲರ್ಸ್’ ಜಲವರ್ಣ ಚಿತ್ರಕಲಾ ಶಿಬಿರ ನಡೆಯುತ್ತಿದೆ. ಮಲೆನಾಡಿನ ನಿಸರ್ಗ ಸೌಂದರ್ಯವನ್ನು…