ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…