ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪ್ರಾರ್ಥಮಿಕ ಮತ್ತು ಪ್ರೌಢ ಶಾಲೆಗಳಿಗೆ ದಸರಾ ರಜೆಯನ್ನು ಅಕ್ಟೋಬರ್ 1 ರಿಂದ 15 ರ ತನಕ ನೀಡಲು ರಾಜ್ಯ ಸರಕಾರದ ಪ್ರಾರ್ಥಮಿಕ ಮತ್ತು ಪ್ರೌಢ ಶಾಲಾ ಶಿಕ್ಷಣ ಸಚಿವರಾಗಿರುವ ಸುರೇಶ್ ಕುಮಾರ್ ಅವರು ಸೂಚನೆ ನೀಡಿದ್ದಾರೆ ಎಂದು ಮಂಗಳೂರು ನಗರ ದಕ್ಷಿಣ ಶಾಸಕ ಡಿ ವೇದವ್ಯಾಸ ಕಾಮತ್ ತಿಳಿಸಿದ್ದಾರೆ.
ಈ ಕುರಿತು ಸಚಿವರನ್ನು ಅಭಿನಂದಿಸಿದ ಶಾಸಕ ಕಾಮತ್ ಅವರು ಅಕ್ಟೋಬರ್ 1 ರಿಂದ ದಸರಾ ರಜೆ ಆರಂಭವಾಗುವುದರಿಂದ ದೇವಿ ದೇವಸ್ಥಾನಗಳಲ್ಲಿ ನಡೆಯುವ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಮಕ್ಕಳಿಗೆ, ಪೋಷಕರಿಗೆ, ಶಿಕ್ಷಕರಿಗೆ, ಶಿಕ್ಷಕೇತರ ಸಿಬ್ಬಂದಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದರು. ಶಾಸಕ ಕಾಮತ್ ಅವರು ಸಚಿವ ಸುರೇಶ್ ಕುಮಾರ್ ಅವರನ್ನು ವೈಯಕ್ತಿಕವಾಗಿ ಭೇಟಿಯಾಗಿ ಮನವಿ ಸಲ್ಲಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…
23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…
ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…
ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…