ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 13-08-2025 | ಆ.21 ರವರೆಗೆ ಮಳೆ ವಿಸ್ತರಣೆ ಎಲ್ಲಿ ? ವಾಯುಭಾರ ಕುಸಿತದ ಕಾರಣದಿಂದ ಮಳೆ ಎಲ್ಲೆಲ್ಲಾ ಇದೆ..?

ಬಂಗಾಳಕೊಲ್ಲಿಯ ಆಂದ್ರಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಒಡಿಸ್ಸಾ ಕರಾವಳಿ ತನಕ ಸಾಗಿ,…

4 hours ago

ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಸಹಾಯಧನ |ವಿವಿಧ ಕಾರ್ಯಕ್ರಮಗಳ ಮೂಲಕ ರೈತರಿಗೆ ನೆರವು

ರಾಜ್ಯದಲ್ಲಿ ತೋಟಗಾರಿಕಾ ಬೆಳೆಗಳ ಅಭಿವೃದ್ಧಿಗೆ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ತೋಟಗಾರಿಕಾ ಬೆಳೆಗಳಿಗೆ…

10 hours ago

ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿಯಲ್ಲಿ ವ್ಯಾಪಕ ಮಳೆಯಾಗಿದೆ. ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ಕರಾವಳಿ ಹಾಗೂ ಉತ್ತರ…

10 hours ago

ತುಳುವರ ಆಟಿ ತಿಂಗಳು | ಆಟಿಯ ಕೊನೆಗೆ ಆಟಿಗೊಂದು ಸುತ್ತು….

ತುಳುನಾಡಿನಲ್ಲಿ ಆಟಿ ಬಹಳ ಮಹತ್ವದ ತಿಂಗಳು. ಈ ಸಮಯದಲ್ಲಿ ವಿವಿಧ ಆಚರಣೆಗಳು ಇರುತ್ತವೆ.…

11 hours ago

ಎತ್ತಿನಹೊಳೆ ಯೋಜನೆ ಕಾಮಗಾರಿ ಪೂರ್ಣಕ್ಕೆ ಕ್ರಮ | ವಿಧಾನಸಭೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿಕೆ

ಎತ್ತಿನಹೊಳೆ ಯೋಜನೆಯಡಿ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೊದಲ…

21 hours ago

ಅರಣ್ಯ ಸಂರಕ್ಷಿಸುವಂತೆ ಅಧಿಕಾರಿಗಳಿಗೆ ಸೂಚನೆ | ಅರಣ್ಯ ಸಚಿವ ಈಶ್ವರ ಖಂಡ್ರೆ

ಅರಣ್ಯ ಭೂಮಿ ಒತ್ತುವರಿ ಮಾಡಿದರೆ ತೆರವು ಮಾಡಬೇಕಾಗುತ್ತದೆ. ಬೇಲಿ ಹಾಕುವುದರಿಂದ ಅರಣ್ಯ ಭೂಮಿ…

1 day ago