Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 29-03-2026 | ಕರ್ನಾಟಕದಲ್ಲಿ ಮತ್ತೆ ಮಳೆ…! ನಿಮ್ಮ ಜಿಲ್ಲೆಯಲ್ಲಿ ಮಳೆ ಇದೆಯಾ..?

ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆಯ ಚಟುವಟಿಕೆ ಮತ್ತೆ ಆರಂಭವಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ…

15 hours ago

ಹವಾಮಾನ ವರದಿ | 28-03-2026 | ಎಪ್ರಿಲ್ 4 ರವರೆಗೆ ಕರಾವಳಿ–ಮಲೆನಾಡು ಪ್ರದೇಶಗಳಿಗೆ ಭಾರಿ ಮಳೆ ಸೂಚನೆ..!

ಕರ್ನಾಟಕದಲ್ಲಿ ಗುಡುಗು ಸಹಿತ ಮಳೆ ಮುಂದುವರಿಯಲಿದೆ, ಕರಾವಳಿ ಮತ್ತು ಮಲೆನಾಡಿನಲ್ಲಿ ಏಪ್ರಿಲ್ 4ರವರೆಗೆ…

2 days ago

ಬೀದಿ ನಾಯಿಗಳ ಸಮಸ್ಯೆ | 27,481 ನಾಯಿ ಕಡಿತ ಪ್ರಕರಣಗಳು ವರದಿ..!

ಜಿಲ್ಲೆಯಲ್ಲಿ ನಾಯಿ ಕಡಿತ ಪ್ರಕರಣಗಳು ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆ ಪ್ರತಿಯೊಂದು ತಾಲೂಕಿನಲ್ಲಿ…

2 days ago

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 days ago

ಹವಾಮಾನ ವರದಿ | 27-03-2026 | ಮಾರ್ಚ್ 28 ರಿಂದ ಮಳೆ ಹೆಚ್ಚಳ ಸೂಚನೆ | ರಾಜ್ಯಾದ್ಯಂತ ಗುಡುಗು ಸಹಿತ ಮಳೆಯ ಮುನ್ಸೂಚನೆ

ಮಾರ್ಚ್ 28ರಿಂದ ಕರ್ನಾಟಕದಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಕರಾವಳಿ ಮತ್ತು…

3 days ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

3 days ago