Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 28-07-2026 | ಮುಂದಿನ 10 ದಿನ ಸಾಮಾನ್ಯ ಮಳೆ – ಆಗಸ್ಟ್ ಆರಂಭದಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…

8 hours ago

200 ಹಸುಗಳಿಂದ ₹2 ಕೋಟಿ ವಾರ್ಷಿಕ ಆದಾಯ…! ಗಮನ ಸೆಳೆದ ಉತ್ತರ ಪ್ರದೇಶದ ಮಾದರಿ

ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…

8 hours ago

ರಬ್ಬರ್ ತೋಟ ಹಸಿರಾಗಿರಬಹುದು… ಆದರೆ ಕಾಡಿಗೆ ಪರ್ಯಾಯವಲ್ಲ…! ಮಲೇಷ್ಯಾ ಅಧ್ಯಯನ ವರದಿ

ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…

13 hours ago

ಅಡುಗೆ ಎಣ್ಣೆ ಆಮದು 7% ಏರಿಕೆ – ಭಾರತ ಇನ್ನೂ ಆಮದು ಅವಲಂಬಿತ

ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್‌ನಲ್ಲಿ ಆಮದು…

13 hours ago

ಕೇರಳದಲ್ಲಿ ಪ್ರತಿವರ್ಷ ₹1,200 ಕೋಟಿ ಮೌಲ್ಯದ ಹಲಸು ವ್ಯರ್ಥ..! ಮೌಲ್ಯವರ್ಧನೆಗೆ ಸರ್ಕಾರ ಮುಂದಾಗಲಿ ಎಂಬ ಒತ್ತಾಯ

ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…

13 hours ago

ಅವೈಜ್ಞಾನಿಕ ಮಳೆ ವರದಿ ಶೈಕ್ಷಣಿಕ ವಲಯಕ್ಕೆ ತೊಂದರೆ – ಹವಾಮಾನ ಮುನ್ಸೂಚನೆ ಕುರಿತು ಎಸ್.ಎಲ್. ಭೋಜೆಗೌಡ ಕಳವಳ

ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…

1 day ago