Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17 – 08 -2026 | ಕರ್ನಾಟಕದಲ್ಲಿ ಮುಂದಿನ ದಿನಗಳ ಹವಾಮಾನ ಹೇಗಿರಲಿದೆ?

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 10 ದಿನಗಳವರೆಗೆ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

2 hours ago

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

9 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago