Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಜಾಗತಿಕ ಬಿಕ್ಕಟ್ಟಿನ ಪರಿಣಾಮ : ಬೆಂಗಳೂರಿಗೆ ಆಟೋ LPG ಪೂರೈಕೆ 300% ಹೆಚ್ಚಿಸಿದ ಇಂಡಿಯನ್ ಆಯಿಲ್

ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…

1 hour ago

ಕೃಷಿಗೆ ಹೊಸ ಚೈತನ್ಯ- ದೂರದರ್ಶನ ಚಂದನದಿಂದ “ರೈತ ರತ್ನ” ರಿಯಾಲಿಟಿ ಶೋ ಆರಂಭ

“ರೈತ ರತ್ನ” ರಿಯಾಲಿಟಿ ಶೋ ಮೂಲಕ ಕೃಷಿಕರ ಸಾಧನೆಗೆ ಹೊಸ ವೇದಿಕೆ ಸಿಕ್ಕಿದೆ.…

2 hours ago

ಮಿಜೋರಾಂನಲ್ಲಿ ಅಕ್ರಮವಾಗಿ ಅಡಿಕೆ ಸಾಗಾಟಕ್ಕೆ ತಡೆ – ₹54.88 ಲಕ್ಷ ಮೌಲ್ಯದ 98 ಚೀಲ ವಶ

ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…

11 hours ago

ಹವಾಮಾನ ವರದಿ | 18-04-2026 | ರಾಜ್ಯದ ಬಹುತೇಕ ಕಡೆ ಸೆಖೆ ಮುಂದುವರಿಕೆ – ಏಪ್ರಿಲ್ 19 ರಿಂದ ಕರಾವಳಿಯಲ್ಲಿ ಮಳೆ ಆರಂಭ!

ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…

19 hours ago

ಗ್ರಾಮೀಣ ಮೌಲ್ಯಗಳು ಮತ್ತು ನಗರ ಜೀವನ – ಸಮತೋಲನವೇ ನಿಜವಾದ ಮಾರ್ಗ!

ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…

1 day ago

ದೇಶಾದ್ಯಂತ ಹವಾಮಾನದಲ್ಲಿ ಬದಲಾವಣೆ..! 13 ರಾಜ್ಯಗಳಲ್ಲಿ ಮಳೆ-ಚಂಡಮಾರುತ ಎಚ್ಚರಿಕೆ, ಉತ್ತರ ಭಾರತದಲ್ಲಿ 40°C ದಾಟಿದ ಉಷ್ಣತೆ

ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…

1 day ago