Advertisement
ಮಾಹಿತಿ

ದಸರಾ ವೇಷ –   ಕೊರಗರ ಅವಹೇಳನ ಮಾಡಿದರೆ ಜೈಲು ಶಿಕ್ಷೆ

Share

ಮಂಗಳೂರು :- ಸರಕಾರದ ಸುತ್ತೋಲೆಯ ಆದೇಶದಂತೆ ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಜಾತಿ ನಿಂದನೆ ಮಾಡಿದರೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement

ದಸರಾ ಆಚರಣೆಯ ಸಮಯದಲ್ಲಿ ಬೇರೆ ಜಾತಿಯ ಜನಾಂಗದವರು ಕೊರಗ ಜನಾಂಗದವರ ವೇಷ ಧರಿಸಿ ಅಂಗಡಿ ಮನೆಗಳ ಮುಂದೆ ಕುಣಿದು ಅಮವಾಸ್ಯೆ ದಿನಗಳಲ್ಲಿ ಕೊರಗ ಜನಾಂಗದವರ ಹೆಂಗಸರಿಗೆ ಉಗುರು ತಲೆಕೂದಲುಗಳನ್ನು ಊಟದಲ್ಲಿ ಹಾಕಿ ಉಣಲು ನೀಡುವುದು, ಬೇರೆ ಜನಾಂಗದವರ ಚಿಕ್ಕ ಮಕ್ಕಳಿಗೆ ಕಾಯಿಲೆ ಇದ್ದಾಗ ಕೊರಗ ಜನಾಂಗದ ಮಹಿಳೆಯನ್ನು ಕರೆದು ಆ ಮಗುವಿಗೆ ಹಾಲು ಉಣಿಸಲು ಬಳಸಿಕೊಂಡು ಮಗುವಿನ ಕಾಯಿಲೆಯನ್ನು ಕೊರಗ ಜನಾಂಗದವರಿಗೆ ಹರಡುವಂತೆ ಮಾಡುವುದು, ಕಂಬಳದ ಕೆರೆಯಲ್ಲಿ ಕುಪ್ಪಿಚೂರು, ಮುಳ್ಳು ಮುಂತಾದವುಗಳು ಇರುವ ಬಗ್ಗೆ ಕಂಬಳದ ಹಿಂದಿನ ದಿನ ಕಂಬಳದ ಕೆರೆಯಲ್ಲಿ ಕೊರಗ ಜನಾಂಗದವರನ್ನು ಬಳಸಿಕೊಳ್ಳುವುದು  ಜಾತ್ರೆ, ಕಂಬಳ ಮತ್ತು ಇನ್ನಿತರ ಸಾರ್ವಜನಿಕ ಸಮಾರಂಭಗಳಲ್ಲಿ ಕೊರಗ ಜನಾಂಗದವರನ್ನು ಡೋಲು ಬಡಿಸಿ ಕುಣಿತಕ್ಕೆ ಬಳಸಿಕೊಳ್ಳುವುದು ಮತ್ತು ಬೇರೆ ಜನಾಂಗದವರ ಹೆಂಗಸರಿಗೆ ಸೀಮಂತದ ದಿನ ಹೆಂಗಸಿನ ಸೀಮಂತದ ಎಂಜಲು ಊಟವನ್ನು ಕೊರಗ ಜನಾಂಗದ ಮಹಿಳೆಯನ್ನು ಕರೆದು ಎಂಜಲು ಊಟ ಮಾಡಿ ಸೀಮಂತಳ ಮೇಲಿರುವ ದೃಷ್ಟಿಯನ್ನು ತೆಗೆಯಲು ಬಳಸಿಕೊಳ್ಳುವುದು ಮತ್ತಿತರ ಚಟುವಟಿಕೆಗಳು ಕೊರಗರ ಅಜಲು ಪದ್ದತಿ ನಿಷೇಧ ಕಾಯ್ದೆಯಡಿ  ಬರುವುದರಿಂದ ಇಂತಹ ಆಚರಣೆಗಳು ಕಂಡು ಬಂದಲ್ಲಿ ಅಂತಹ ಪ್ರಕರಣಗಳನ್ನು  ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲೆ ದೌರ್ಜನ್ಯ ನಿಷೇಧ ಅಧಿನಿಯಮ 1989ರ ಅಡಿಯಲ್ಲಿ ನೊಂದಾಯಿಸಿ ಕಾನೂನು ಕ್ರಮ ಜರುಗಿಸಲಾಗುವುದು.  ಅಲ್ಲದೆ 5 ರಿಂದ 6 ವರ್ಷಗಳವರೆಗೆ ಜೈಲು ಶಿಕ್ಷೆ ಮತ್ತು ರೂ.5000/ ದಂಡ ವಿಧಿಸಲಾಗುವುದು.  ಆದ ಕಾರಣ ಮುಂಬರುವ ದಸರಾ ಹಬ್ಬಗಳ ಸಮಯದಲ್ಲಿ ಇಂತಹ ಪ್ರಸಂಗಗಳು ಕಂಡು ಬಂದಲ್ಲಿ ಹತ್ತಿರದ ಪೋಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಮಂಗಳೂರು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ಜೊತೆಗೆ ಮಲೆನಾಡಲ್ಲಿ ಸಿಡಿಲಬ್ಬರ | ಸುಬ್ರಹ್ಮಣ್ಯದಲ್ಲಿ ಯುವಕ ಬಲಿ | ಮಡಿಕೇರಿಯಲ್ಲಿ ಕಾರ್ಮಿಕ ಗಂಭೀರ |

ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ  ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…

9 hours ago

ವೆದರ್‌ ಮಿರರ್‌ | 03.05.2024 |ಮೇ. 4ರಿಂದ ಮೋಡ| ಮೇ.6 ರಿಂದ ಅಲ್ಲಲ್ಲಿ ಮಳೆ ನಿರೀಕ್ಷೆ

04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…

18 hours ago

ವೆದರ್‌ ಮಿರರ್‌ | 2.05.2024 | ಮೋಡದ ವಾತಾವರಣ | ಮತ್ತೆ ದೂರವಾದ ಮಳೆ…!| ಮತ್ತೆ ಹೆಚ್ಚಳವಾಗುತ್ತಿರುವ ತಾಪಮಾನ |

03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…

2 days ago

ಬಿದಿರು ಕೃಷಿ | ತರಕಾರಿ ಕೃಷಿಯಾಗಿ ಬಿದಿರು

ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…

2 days ago

ಅಡಿಕೆ ಹಳದಿ ಎಲೆರೋಗ – ಚುನಾವಣೆ

ಅಡಿಕೆ ಕೂಡಾ ಇಂದು ಬಹುಮುಖ್ಯವಾದ ಚುನಾವಣಾ ವಿಷಯ. ಹೀಗಾಗಿ ಅಡಿಕೆ ಹಳದಿ ಎಲೆರೋಗ…

2 days ago

ವಾರದ ಅತಿಥಿ | ಸುಬ್ರಾಯ ಚೊಕ್ಕಾಡಿ ಮಾತು

https://youtu.be/Vh1tYlOKav0?si=M4grG9euj6dXmkE2 ರೂರಲ್ ಮಿರರ್‌ ವಾರದ ಅತಿಥಿಯಾಗಿ ಹಿರಿಯ ಕವಿ ಸುಬ್ರಾಯ ಚೊಕ್ಕಾಡಿ ಅವರು…

2 days ago