Advertisement
ಸುದ್ದಿಗಳು

ದಾನಿಗಳ ನೆರವಿನಿಂದ ನಿರ್ಮಿಸಿದ ಎರಡನೇ ಮನೆ ‘ಬೆಳಕು’ ಹಸ್ತಾಂತರ

Share

ಸುಳ್ಯ: ಸುಳ್ಯ ತಹಶೀಲ್ದಾರ್ ಎನ್‌.ಎ.ಕುಂಞಿ ಅಹಮ್ಮದ್ ನೇತೃತ್ವದಲ್ಲಿ ದಾನಿಗಳ ಆರ್ಥಿಕ ನೆರವಿನಿಂದ ಮತ್ತು ವಿವಿಧ ಯುವ ಸಂಘಟನೆಗಳ ಶ್ರಮದಾನದಿಂದ ಅಜ್ಜಾವರದಲ್ಲಿ ನಿರ್ಮಿಸಿದ ಮನೆಯನ್ನು ಮಹಮ್ಮದ್ ಕುಂಞಿ ಅವರಿಗೆ ಹಸ್ತಾಂತರಿಸಲಾಯಿತು. ಶನಿವಾರ ನಡೆದ ಕಾರ್ಯಕ್ರಮದಲ್ಲಿ ಶಾಸಕ ಎಸ್.ಅಂಗಾರ ಮನೆಯನ್ನು ಉದ್ಘಾಟಿಸಿ ಹಸ್ತಾಂತರಿಸಿದರು.

ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ತಹಶೀಲ್ದಾರ್ ಎನ್.ಎ.ಕುಂಞಿ ಅಹಮ್ಮದ್, ಅಜ್ಜಾವರ ಗ್ರಾ.ಪಂ.ಅಧ್ಯಕ್ಷೆ ಬೀನಾ ಕರುಣಾಕರ, ನಗರ ಪಂಚಾಯತ್ ಮುಖ್ಯಾಧಿಕಾರಿ ಎನ್.ಮತ್ತಡಿ, ಕಂದಾಯ ನಿರೀಕ್ಷಕ ಕೊರಗಪ್ಪ ಹೆಗ್ಡೆ, ರಹೀಂ ಬೀಜದಕಟ್ಟೆ, ತಾಜುದ್ದೀನ್, ಗೋಪಾಲಕೃಷ್ಣ ಕರೋಡಿ, ಪದ್ಮನಾಭ ಪಾತಿಕಲ್ಲು, ಶಿಲ್ಪಾ ಸುದೇವ್, ಎ.ಬಿ.ಅಶ್ರಫ್ ಸಹದಿ, ಬೆಳಕು ತಂಡದ ಲೋಕೇಶ್ ಗುಡ್ಡೆಮನೆ, ವಿನೋದ್ ಲಸ್ರಾದೋ ಮತ್ತಿತರರು ಉಪಸ್ಥಿತರಿದ್ದರು. ಶರೀಪ್ ಜಟ್ಟಿಪಳ್ಳ ಸ್ವಾಗತಿಸಿದರು. ಪ್ರಸಾದ್ ಕಾಟೂರು ಕಾರ್ಯಕ್ರಮ ನಿರೂಪಿಸಿದರು‌.

ಮನೆ ಇಲ್ಲದ ನಿರ್ಗತಿಕ ಕುಟುಂಬಗಳಿಗೆ ಮನೆ ನಿರ್ಮಿಸುವ ‘ಬೆಳಕು’ ಯೋಜನೆಯಡಿ ಅಜ್ಜಾವರದಲ್ಲಿ ನಿರ್ಮಿಸಿದ ಎರಡನೇ ಮನೆ ಇದಾಗಿದೆ. ಒಂದೂವರೆ ತಿಂಗಳಲ್ಲಿ ದಾನಿಗಳ ನೆರವಿನಿಂದ ಅಜ್ಜಾವರದಲ್ಲಿ ಎರಡು ಮನೆಯ ನಿರ್ಮಾಣ ಮಾಡಲಾಗಿದೆ. 18 ದಿನದಲ್ಲಿ ಸುಮಾರು ಎರಡು ಲಕ್ಷ ರೂ ವೆಚ್ಚದಲ್ಲಿ ಎರಡನೇ ಮನೆಯ ನಿರ್ಮಾಣ ಪೂರ್ತಿಯಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

5 hours ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

6 hours ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago