Advertisement

ದೀಪಕ್ ಚಹಾರ್ ಮೂರು ದಿನದಲ್ಲಿ ಎರಡನೇ ಹ್ಯಾಟ್ರಿಕ್ !

Share

ತಿರುವನಂತಪುರ: ಭಾರತದ ಕ್ರಿಕೆಟ್ ತಂಡದ ಮಧ್ಯಮ ವೇಗಿ ದೀಪಕ್ ಚಹಾರ್ ಮೂರು ದಿನಗಳಲ್ಲಿ ಎರಡನೇ ಬಾರಿ ಟ್ವೆಂಟಿ-20 ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್ ಗಳಿಸುವ ಮೂಲಕ ತನ್ನ ಅಪೂರ್ವ ಫಾರ್ಮ್‌ನ್ನು ಮುಂದುವರಿಸಿದ್ದಾರೆ.

ಬಾಂಗ್ಲಾ ವಿರುದ್ಧ ರವಿವಾರ ನಾಗ್ಪುರದಲ್ಲಿ ನಡೆದ ಟ್ವೆಂಟಿ-20 ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ತನ್ನ ಮೊದಲ ಹ್ಯಾಟ್ರಿಕ್ ಪಡೆದಿದ್ದ ರಾಜಸ್ಥಾನದ ಬೌಲರ್ ದೀಪಕ್ ಚಹಾರ್ ಇಂದು ಸೈಯದ್ ಮುಷ್ತಾಕ್ ಅಲಿ ಟ್ವೆಂಟಿ-20 ದೇಶಿಯ ಟೂರ್ನಮೆಂಟ್‌ನಲ್ಲಿ ಮತ್ತೊಮ್ಮೆ ಹ್ಯಾಟ್ರಿಕ್ ಗಳಿಸಿದರು. ಬಾಂಗ್ಲಾ ವಿರುದ್ಧ 7 ರನ್‌ಗೆ 6 ವಿಕೆಟ್ ಗಳಿಸಿದ್ದರು .
ರಾಜಸ್ಥಾನ ಮತ್ತು ವಿದರ್ಭ ತಂಡಗಳ ನಡುವೆ ನಡೆದ ಪಂದ್ಯವನ್ನು 13 ಓವರ್‌ಗಳಿಗೆ ಕಡಿತಗೊಳಿಸಲಾಗಿತ್ತು. ದೀಪಕ್ ಚಹಾರ್ ನೆರವಿನಲ್ಲಿ ರಾಜಸ್ಥಾನ ತಂಡ ಎದುರಾಳಿ ವಿದರ್ಭವನ್ನು 13 ಓವರ್‌ಗಳಲ್ಲಿ 9 ವಿಕೆಟ್‌ಗಳ ನಷ್ಟಕ್ಕೆ 99 ರನ್‌ಗಳಿಗೆ ನಿಯಂತ್ರಿಸಿತ್ತು.

ಚಹಾರ್ ಮೂರು ಓವರ್‌ಗಳ ಬೌಲಿಂಗ್ ನಡೆಸಿದ್ದರು. ಇದರಲ್ಲಿ ಒಂದು ಮೇಡನ್ ಓವರ್ ಆಗಿತ್ತು. ಅಂತಿಮ ಓವರ್‌ನಲ್ಲಿ ಹ್ಯಾಟ್ರಿಕ್ ಪಡೆದರು. ಇದರಲ್ಲಿ 4 ವಿಕೆಟ್‌ಗಳನ್ನು ಪಡೆದರು. ಇದರಲ್ಲಿ ಅಂತಿಮ ಮೂರು ಎಸೆತಗಳಲ್ಲಿ ಮೂವರು ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಅಟ್ಟುವ ಮೂಲಕ ಹ್ಯಾಟ್ರಿಕ್ ಸಂಪಾದಿಸಿದರು.

ವಿದರ್ಭ 12 ಓವರ್‌ಗಳ ಮುಕ್ತಾಯಕ್ಕೆ 5 ವಿಕೆಟ್‌ಗಳ ನಷ್ಟದಲ್ಲಿ 93 ರನ್ ಗಳಿಸಿತ್ತು. 13ನೇ ಹಾಗೂ ಅಂತಿಮ ಓವರ್‌ನಲ್ಲಿ ದಾಳಿಗಿಳಿದ ಚಹಾರ್ ಮೊದಲ ಎಸೆತದಲ್ಲಿ ರಿಷಭ್ ರಾತೋಡ್(0) ಅವರಿಗೆ ಪೆವಿಲಿಯನ್ ಹಾದಿ ತೋರಿಸಿದರು. ಅದೇ ಓವರ್‌ನ 4ನೇ ಎಸೆತದಲ್ಲಿ ದರ್ಶನ್ ನಾಲ್‌ಕಾಂಡೆ (0) ಬಂದ ದಾರಿಯಲ್ಲೇ ವಾಪಸಾದರು. 5ನೇ ಎಸೆತದಲ್ಲಿ ಶ್ರೀಕಾಂತ್ ವಾಘ್(13) ವಿಕೆಟ್ ಒಪ್ಪಿಸಿದರು. 6ನೇ ಎಸೆತದಲ್ಲಿ ಅಕ್ಷಯ್ ವಾಡ್‌ಕರ್(0) ಖಾತೆ ತೆರೆಯದೆ ಬೌಲ್ಡ್ ಆಗುವುದರೊಂದಿಗೆ ಚಹಾರ್ ಹ್ಯಾಟ್ರಿಕ್ ಗಳಿಸಿದರು. ಇದರೊಂದಿಗೆ ದೀಪಕ್ ಚಹಾರ್ 3 ಓವರ್‌ಗಳಲ್ಲಿ 18 ರನ್‌ಗೆ 4 ವಿಕೆಟ್‌ಗಳನ್ನು ತನ್ನ ಖಾತೆಗೆ ಜಮೆ ಮಾಡಿದರು.

ವಿಜೆಡಿ ನಿಯಮದಂತೆ ಗೆಲುವಿಗೆ 13 ಓವರ್‌ಗಳಲ್ಲಿ 107 ರನ್ ಗಳಿಸಬೇಕಿದ್ದ ರಾಜಸ್ಥಾನ ತಂಡ 8 ವಿಕೆಟ್ ನಷ್ಟದಲ್ಲಿ 105 ಗಳಿಸುವ ಮೂಲಕ 1 ರನ್ ಅಂತರದಲ್ಲಿ ಸೋಲು ಅನುಭವಿಸಿತು. ದೀಪಕ್ ಚಹಾರ್ ಹ್ಯಾಟ್ರಿಕ್‌ನಿಂದ ವಿದರ್ಭವನ್ನು ರಾಜಸ್ಥಾನ ಕಡಿಮೆ ಮೊತ್ತಕ್ಕೆ ನಿಯಂತ್ರಿಸಿದ್ದರೂ ಗೆಲುವು ದಾಖಲಿಸಲು ಸಾಧ್ಯವಾಗಲಿಲ್ಲ. ಮಣೆಂದರ್ ಸಿಂಗ್ 44 ರನ್, ಅಂಕಿತ್ ಲಾಂಬಾ 15ರನ್ ಮತ್ತು ಅರ್ಜಿತ್ ಗುಪ್ತಾ 12 ರನ್‌ಗಳ ಕೊಡುಗೆ ನೀಡಿದರೂ ತಂಡಕ್ಕೆ ಗೆಲುವು ದೊರೆಯಲಿಲ್ಲ. ಅಕ್ಷಯ್ ವಾಖರೆ 15ಕ್ಕೆ 3 ವಿಕೆಟ್ ಉಡಾಯಿಸಿ ರಾಜಸ್ಥಾನಕ್ಕೆ ಗೆಲುವು ನಿರಾಕರಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

3 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

4 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

1 day ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago