MIRROR FOCUS

ದೀಪ ಹಚ್ಚೋಣ ಇಂದು | ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ…..| ಕೊರೊನಾ ಎಂಬ ಶತ್ರು ಪೀಡೆ ನಾಶವಾಗಲಿ….|

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ಭಾನುವಾರ ರಾತ್ರಿ 9 ಗಂಟೆಗೆ… 9 ನಿಮಿಷಗಳ ಕಾಲ ದೀಪ ಹಚ್ಚೋಣ. ಹಣತೆಯ ದೀಪವಾದರೆ ಉತ್ತಮ. ದೀಪ ಬೆಳಗುವುದು ಎಂದರೆ ಕೇವಲ ದೀಪವಲ್ಲ ಅದರಲ್ಲೊಂದು ಶಕ್ತಿ ಇದೆ. ಆತ್ಮಬಲ ಸಿಗಲಿದೆ. ಹೀಗೆಂದು ಜ್ಯೋತಿಷ್ಯದ ವಿವರಣೆಯೂ ಇದೆ.

Advertisement

ದೀಪ ಹಚ್ಚುವ ಸಮಯದಲ್ಲಿ  ಸಾಧ್ಯವಿದ್ದವರು ಈ ಸಾಲುಗಳನ್ನು  ಹೇಳಿದರೆ ಇನ್ನೂ ಉತ್ತಮ

ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ ಹುವೇಮ

ಪರಮಾತ್ ಸಧಸ್ಥಾತ್ | ಸ ನ: ಪರ್ಷದತಿ ದುರ್ಗಾಣಿ ವಿಶ್ವಾ

ಕ್ಷಾಮದ್ದೇವೋ ಅತಿ ದುರಿತಾತ್ಯಗ್ನಿ: |

ಅಂದರೆ ,ಈ ವಾಕ್ಯವು ಅಗ್ನಿದೇವನ ಸ್ತುತಿ.

ಶತ್ರುಸೇನೆಯನ್ನು ಪೃತನಾ ಎನ್ನುವರು. ಇದನ್ನು ಜಯಿಸುವವನು ಪೃತನಾಜಿತನು. ಸಹಾಮಾನವೆಂದರೆ  ಶತ್ರುಗಳನ್ನು ಹಿಮ್ಮೆಟ್ಟಿಸುವವನು ಎಂದರ್ಥ.  ಈ  ಎರಡೂ ಗುಣಗಳುಳ್ಳ  ಉಗ್ರನೂ ಆದ ಅಗ್ನಿಯು ಉತ್ಕೃಷ್ಟವಾದ ದೇಶದಲ್ಲಿ  ತನ್ನ ಸೇವಕರೊಡಗೂಡಿನ ಇದ್ದುಕೊಂಡಿರುವನಷ್ಟೇ, ಅವನನ್ನು ಆಹ್ವಾನಿಸುವೆವು. ಅವನು ನಮ್ಮ ಅತಿ ಕಷ್ಟಕರವಾದ ಸನ್ನಿವೇಶಗಳನ್ನೆಲ್ಲ ನಾಶಗೊಳಿಸುವವನಾಗಲಿ  ಮತ್ತು ಅಗ್ನಿ ದೇವನು ಅಪರಾಧಿಗಳಾದ ನಮ್ಮನ್ನು ಕ್ಷಮಿಸುವವನಾಗಿ ದುರಿತಗಳನ್ನೆಲ್ಲ ದೂರ ಮಾಡಿ ಶುದ್ದರಾಗುವಂತೆ ಮಾಡಲಿ ಎಂದರ್ಥ.

ಪ್ರಧಾನಿ ನರೇಂದ್ರ ಮೋದಿ ಅವರು  ಹಣತೆ ಹಚ್ಚಲು  ಹೇಳಿದ್ದಾರೆ, ಇದು ಭಾರತದಂತಹ  ಆಧ್ಯಾತ್ಮ ಮೂಲದ ದೇಶದಲ್ಲಿ ಹೆಚ್ಚು ಪ್ರಭಾವ ಬೀರುವ ಸಂಗತಿಯಾಗಿದೆ. ಪ್ರತಿಯೊಬ್ಬರೂ ಇದರ ಆಚರಣೆ ಮಾಡಿದರೆ ದೈವೀಕ ಶಕ್ತಿ, ಆಯುರ್ವೇದ ಶಕ್ತಿ ಹೊಂದಿರುವ  ಈ ದೇಶದಲ್ಲಿ  ಹೆಚ್ಚು ಪರಿಣಾಮ ಬೀರಬಲ್ಲುದು  ಎಂದು  ಸುಳ್ಯದ ವಳಲಂಬೆಯ ವೇದ ವಿದ್ವಾಂಸರಾದ ಕರುವಜೆ ಕೇಶವ ಜೋಯಿಸರು ಹೇಳುತ್ತಾರೆ. ಪೃತನಾಜಿತಗ್ಂ….. ಸಾಲುಗಳು ಕೂಡಾ ದೇಶಕ್ಕೆ ಬಲ ತುಂಬಲಿದೆ ಎನ್ನುತ್ತಾರೆ ಕರುವಜೆ ಕೇಶವ ಜೋಯಿಸರು.

Advertisement

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಸುರೆಂಬ ಉಸಿರಿನ ಮಹತ್ವ ಇದು…

ವರುಷದಿಂದ ವರುಷಕ್ಕೆ ಬಿಸಿ ಏರುತ್ತಿರುವ ಭೂಮಿ, ಕಳಕೊಳ್ಳುತ್ತಿರುವ ಸಸ್ಯ ಸಂಪತ್ತು, ಭೂಮಿಯನ್ನು ತಂಪಾಗಿಸಲು…

2 hours ago

ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ

ಹಲಸು ಮೌಲ್ಯವರ್ಧನೆಯಾಗಿ ಅಡುಗೆ ಮನೆ ಸೇರುತ್ತಿದೆ. ಅದರ ಜೊತೆಗೇ ಹಲಸು ವಿವಿಧ ರೂಪದಲ್ಲಿ…

3 hours ago

ಸಂಪತ್ತಿನಷ್ಟೇ ಸದ್ಭುದ್ಧಿಯೂ ಮುಖ್ಯ – ರಾಘವೇಶ್ವರ ಶ್ರೀ

ಸಮಾಜಕ್ಕೆ, ರಾಷ್ಟ್ರಕ್ಕೆ ವಿಶ್ವಕ್ಕೆ ಬೆಳಕು ನೀಡುವ ವ್ಯವಸ್ಥೆಯನ್ನು ಬೆಳೆಸುವುದು ಇಡೀ ಸಮಾಜದ ಜವಾಬ್ದಾರಿ…

3 hours ago

ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…

ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯ ಕಾರ್ಯಕರ್ತ ಧನಂಜಯ ವಾಗ್ಲೆ ಅವರು ಈಚೆಗೆ ನಿಧನರಾದರು.…

8 hours ago

ಹವಾಮಾನ ವರದಿ | 13-07-2025 | ಇಂದು ಸಾಮಾನ್ಯ ಮಳೆ | ಕರಾವಳಿ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಹೆಚ್ಚಾಗಲಿದೆ – ಏಕೆ?

ಬಾಂಗ್ಲಾ ದೇಶದ ಕರಾವಳಿಯಲ್ಲಿ ಉಂಟಾಗಿರುವ ತಿರುವಿಕೆಯ ಪರಿಣಾಮದಿಂದ ನಮ್ಮ ಕರಾವಳಿಯಲ್ಲಿ ಮಳೆಯ ಪ್ರಮಾಣ…

11 hours ago

ಮೊಬೈಲ್‌ ಕಣ್ಣು ಮಾತ್ರವಲ್ಲ – ಮನಸ್ಸನ್ನೂ ಹಾಳು ಮಾಡುತ್ತದೆ..!

ಮೊಬೈಲ್‌ ಎಷ್ಟು ಅಪಾಯಕಾರಿ ಸ್ಥಿತಿಗೆ ಮಕ್ಕಳನ್ನು ದೂಡುತ್ತದೆ ಎಂದರೆ, ಕಣ್ಣು ಮಾತ್ರವಲ್ಲ ಮನಸ್ಸುಗಳನ್ನೂ…

13 hours ago