Advertisement
MIRROR FOCUS

ದೀಪ ಹಚ್ಚೋಣ ಇಂದು | ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ…..| ಕೊರೊನಾ ಎಂಬ ಶತ್ರು ಪೀಡೆ ನಾಶವಾಗಲಿ….|

Share

ಸುಳ್ಯ: ಭಾನುವಾರ ರಾತ್ರಿ 9 ಗಂಟೆಗೆ… 9 ನಿಮಿಷಗಳ ಕಾಲ ದೀಪ ಹಚ್ಚೋಣ. ಹಣತೆಯ ದೀಪವಾದರೆ ಉತ್ತಮ. ದೀಪ ಬೆಳಗುವುದು ಎಂದರೆ ಕೇವಲ ದೀಪವಲ್ಲ ಅದರಲ್ಲೊಂದು ಶಕ್ತಿ ಇದೆ. ಆತ್ಮಬಲ ಸಿಗಲಿದೆ. ಹೀಗೆಂದು ಜ್ಯೋತಿಷ್ಯದ ವಿವರಣೆಯೂ ಇದೆ.

Advertisement
Advertisement

ದೀಪ ಹಚ್ಚುವ ಸಮಯದಲ್ಲಿ  ಸಾಧ್ಯವಿದ್ದವರು ಈ ಸಾಲುಗಳನ್ನು  ಹೇಳಿದರೆ ಇನ್ನೂ ಉತ್ತಮ

ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ ಹುವೇಮ

ಪರಮಾತ್ ಸಧಸ್ಥಾತ್ | ಸ ನ: ಪರ್ಷದತಿ ದುರ್ಗಾಣಿ ವಿಶ್ವಾ

ಕ್ಷಾಮದ್ದೇವೋ ಅತಿ ದುರಿತಾತ್ಯಗ್ನಿ: |

ಅಂದರೆ ,ಈ ವಾಕ್ಯವು ಅಗ್ನಿದೇವನ ಸ್ತುತಿ.

ಶತ್ರುಸೇನೆಯನ್ನು ಪೃತನಾ ಎನ್ನುವರು. ಇದನ್ನು ಜಯಿಸುವವನು ಪೃತನಾಜಿತನು. ಸಹಾಮಾನವೆಂದರೆ  ಶತ್ರುಗಳನ್ನು ಹಿಮ್ಮೆಟ್ಟಿಸುವವನು ಎಂದರ್ಥ.  ಈ  ಎರಡೂ ಗುಣಗಳುಳ್ಳ  ಉಗ್ರನೂ ಆದ ಅಗ್ನಿಯು ಉತ್ಕೃಷ್ಟವಾದ ದೇಶದಲ್ಲಿ  ತನ್ನ ಸೇವಕರೊಡಗೂಡಿನ ಇದ್ದುಕೊಂಡಿರುವನಷ್ಟೇ, ಅವನನ್ನು ಆಹ್ವಾನಿಸುವೆವು. ಅವನು ನಮ್ಮ ಅತಿ ಕಷ್ಟಕರವಾದ ಸನ್ನಿವೇಶಗಳನ್ನೆಲ್ಲ ನಾಶಗೊಳಿಸುವವನಾಗಲಿ  ಮತ್ತು ಅಗ್ನಿ ದೇವನು ಅಪರಾಧಿಗಳಾದ ನಮ್ಮನ್ನು ಕ್ಷಮಿಸುವವನಾಗಿ ದುರಿತಗಳನ್ನೆಲ್ಲ ದೂರ ಮಾಡಿ ಶುದ್ದರಾಗುವಂತೆ ಮಾಡಲಿ ಎಂದರ್ಥ.

ಪ್ರಧಾನಿ ನರೇಂದ್ರ ಮೋದಿ ಅವರು  ಹಣತೆ ಹಚ್ಚಲು  ಹೇಳಿದ್ದಾರೆ, ಇದು ಭಾರತದಂತಹ  ಆಧ್ಯಾತ್ಮ ಮೂಲದ ದೇಶದಲ್ಲಿ ಹೆಚ್ಚು ಪ್ರಭಾವ ಬೀರುವ ಸಂಗತಿಯಾಗಿದೆ. ಪ್ರತಿಯೊಬ್ಬರೂ ಇದರ ಆಚರಣೆ ಮಾಡಿದರೆ ದೈವೀಕ ಶಕ್ತಿ, ಆಯುರ್ವೇದ ಶಕ್ತಿ ಹೊಂದಿರುವ  ಈ ದೇಶದಲ್ಲಿ  ಹೆಚ್ಚು ಪರಿಣಾಮ ಬೀರಬಲ್ಲುದು  ಎಂದು  ಸುಳ್ಯದ ವಳಲಂಬೆಯ ವೇದ ವಿದ್ವಾಂಸರಾದ ಕರುವಜೆ ಕೇಶವ ಜೋಯಿಸರು ಹೇಳುತ್ತಾರೆ. ಪೃತನಾಜಿತಗ್ಂ….. ಸಾಲುಗಳು ಕೂಡಾ ದೇಶಕ್ಕೆ ಬಲ ತುಂಬಲಿದೆ ಎನ್ನುತ್ತಾರೆ ಕರುವಜೆ ಕೇಶವ ಜೋಯಿಸರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸಾಧನೆಗಿಂತ ದೊಡ್ಡದು ಸಂಯಮ

ಸಾಧನೆ ಮನುಷ್ಯನಿಗೆ ಎತ್ತರ ಕೊಡಬಹುದು, ಆದರೆ ಸಂಯಮ ಮತ್ತು ವಿನಯ ಮಾತ್ರ ಗೌರವವನ್ನು…

49 minutes ago

ತೆಂಗಿನ ರೈತರಿಗೆ ಆಶಾಕಿರಣ | ರೋಗ ನಿಯಂತ್ರಣ ಮತ್ತು ಹೊಸ ತಳಿ ಯೋಜನೆ

ತೆಂಗಿನ ತೋಟಗಳಲ್ಲಿ ರೋಗ ಮತ್ತು ಕಡಿಮೆ ಇಳುವರಿ ಸಮಸ್ಯೆ ನಿವಾರಣೆಗೆ ಕೇಂದ್ರ ಸರ್ಕಾರ…

1 hour ago

ಎಳನೀರು ಸಂಕಷ್ಟ | ಉತ್ಪಾದನೆ ಕುಸಿತದಿಂದ ಸರಬರಾಜಿಗೆ ಹೊಡೆತ..!

ಭಾರತದ ತೆಂಗಿನ ನಗರಿ ಎಂದು ಕರೆಯುವ ಪೊಳ್ಳಾಚಿ-ಅಣ್ಣಾಮಲೈ ಭಾಗದಲ್ಲಿ ಎಳನೀರು ಉತ್ಪಾದನೆ 40%…

2 hours ago

ಅಡಿಕೆ ಬೆಳೆಗಾರರ ಮೌನ : ಜಾಗತಿಕ ಎಚ್ಚರದ ಘಂಟೆ ಮೊಳಗುತ್ತಿದ್ದರೂ ಏಕೆ ನಿರಾಳತೆ?

WHO ಮತ್ತು ಜಾಗತಿಕ ಆರೋಗ್ಯ ಸಂಸ್ಥೆಗಳ ಅಡಿಕೆ ಕುರಿತ ನಿಯಂತ್ರಣ ಚರ್ಚೆಗಳ ನಡುವೆಯೂ…

10 hours ago

ಚಿಕ್ಕಮಗಳೂರು ಕಾಳುಮೆಣಸಿಗೆ ಜಾಗತಿಕ ಸ್ಪರ್ಶ | ರಫ್ತು ಮಾರುಕಟ್ಟೆ ಗೆಲ್ಲಲು ಫೆ. 17ಕ್ಕೆ ವಿಶೇಷ ತರಬೇತಿ

ಚಿಕ್ಕಮಗಳೂರಿನಲ್ಲಿ ಫೆ.17ರಂದು ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು…

10 hours ago

ಹೊಸರುಚಿ | ಹಲಸಿನ ಕಾಯಿ ಬೋಂಡಾ ರೆಸಿಪಿ – ಇದು ರುಚಿಕರ ಗ್ರಾಮೀಣ ಸ್ನ್ಯಾಕ್

ಹಲಸಿನ ಕಾಯಿ ಬಳಸಿ ಸುಲಭವಾಗಿ ಮಾಡುವ ಕರಕರೆ ಬೋಂಡಾ – ಸಾಮಾನ್ಯ ಬೋಂಡಾ…

1 day ago