Advertisement
MIRROR FOCUS

ದೀಪ ಹಚ್ಚೋಣ ಇಂದು | ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ…..| ಕೊರೊನಾ ಎಂಬ ಶತ್ರು ಪೀಡೆ ನಾಶವಾಗಲಿ….|

Share

ಸುಳ್ಯ: ಭಾನುವಾರ ರಾತ್ರಿ 9 ಗಂಟೆಗೆ… 9 ನಿಮಿಷಗಳ ಕಾಲ ದೀಪ ಹಚ್ಚೋಣ. ಹಣತೆಯ ದೀಪವಾದರೆ ಉತ್ತಮ. ದೀಪ ಬೆಳಗುವುದು ಎಂದರೆ ಕೇವಲ ದೀಪವಲ್ಲ ಅದರಲ್ಲೊಂದು ಶಕ್ತಿ ಇದೆ. ಆತ್ಮಬಲ ಸಿಗಲಿದೆ. ಹೀಗೆಂದು ಜ್ಯೋತಿಷ್ಯದ ವಿವರಣೆಯೂ ಇದೆ.

Advertisement

ದೀಪ ಹಚ್ಚುವ ಸಮಯದಲ್ಲಿ  ಸಾಧ್ಯವಿದ್ದವರು ಈ ಸಾಲುಗಳನ್ನು  ಹೇಳಿದರೆ ಇನ್ನೂ ಉತ್ತಮ

ಪೃತನಾಜಿತಗ್ಂ ಸಹಮಾನಮುಗ್ರಮಗ್ನಿಗ್ಂ ಹುವೇಮ

ಪರಮಾತ್ ಸಧಸ್ಥಾತ್ | ಸ ನ: ಪರ್ಷದತಿ ದುರ್ಗಾಣಿ ವಿಶ್ವಾ

ಕ್ಷಾಮದ್ದೇವೋ ಅತಿ ದುರಿತಾತ್ಯಗ್ನಿ: |

ಅಂದರೆ ,ಈ ವಾಕ್ಯವು ಅಗ್ನಿದೇವನ ಸ್ತುತಿ.

ಶತ್ರುಸೇನೆಯನ್ನು ಪೃತನಾ ಎನ್ನುವರು. ಇದನ್ನು ಜಯಿಸುವವನು ಪೃತನಾಜಿತನು. ಸಹಾಮಾನವೆಂದರೆ  ಶತ್ರುಗಳನ್ನು ಹಿಮ್ಮೆಟ್ಟಿಸುವವನು ಎಂದರ್ಥ.  ಈ  ಎರಡೂ ಗುಣಗಳುಳ್ಳ  ಉಗ್ರನೂ ಆದ ಅಗ್ನಿಯು ಉತ್ಕೃಷ್ಟವಾದ ದೇಶದಲ್ಲಿ  ತನ್ನ ಸೇವಕರೊಡಗೂಡಿನ ಇದ್ದುಕೊಂಡಿರುವನಷ್ಟೇ, ಅವನನ್ನು ಆಹ್ವಾನಿಸುವೆವು. ಅವನು ನಮ್ಮ ಅತಿ ಕಷ್ಟಕರವಾದ ಸನ್ನಿವೇಶಗಳನ್ನೆಲ್ಲ ನಾಶಗೊಳಿಸುವವನಾಗಲಿ  ಮತ್ತು ಅಗ್ನಿ ದೇವನು ಅಪರಾಧಿಗಳಾದ ನಮ್ಮನ್ನು ಕ್ಷಮಿಸುವವನಾಗಿ ದುರಿತಗಳನ್ನೆಲ್ಲ ದೂರ ಮಾಡಿ ಶುದ್ದರಾಗುವಂತೆ ಮಾಡಲಿ ಎಂದರ್ಥ.

ಪ್ರಧಾನಿ ನರೇಂದ್ರ ಮೋದಿ ಅವರು  ಹಣತೆ ಹಚ್ಚಲು  ಹೇಳಿದ್ದಾರೆ, ಇದು ಭಾರತದಂತಹ  ಆಧ್ಯಾತ್ಮ ಮೂಲದ ದೇಶದಲ್ಲಿ ಹೆಚ್ಚು ಪ್ರಭಾವ ಬೀರುವ ಸಂಗತಿಯಾಗಿದೆ. ಪ್ರತಿಯೊಬ್ಬರೂ ಇದರ ಆಚರಣೆ ಮಾಡಿದರೆ ದೈವೀಕ ಶಕ್ತಿ, ಆಯುರ್ವೇದ ಶಕ್ತಿ ಹೊಂದಿರುವ  ಈ ದೇಶದಲ್ಲಿ  ಹೆಚ್ಚು ಪರಿಣಾಮ ಬೀರಬಲ್ಲುದು  ಎಂದು  ಸುಳ್ಯದ ವಳಲಂಬೆಯ ವೇದ ವಿದ್ವಾಂಸರಾದ ಕರುವಜೆ ಕೇಶವ ಜೋಯಿಸರು ಹೇಳುತ್ತಾರೆ. ಪೃತನಾಜಿತಗ್ಂ….. ಸಾಲುಗಳು ಕೂಡಾ ದೇಶಕ್ಕೆ ಬಲ ತುಂಬಲಿದೆ ಎನ್ನುತ್ತಾರೆ ಕರುವಜೆ ಕೇಶವ ಜೋಯಿಸರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 hours ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

3 hours ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

3 hours ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

3 hours ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

12 hours ago

ಕಾವೇರಿ ತೀರ ಅಪಾಯ ಎಚ್ಚರಿಕೆ: ಬಲಮುರಿ-ಎಡಮುರಿ ಪ್ರವಾಸಕ್ಕೆ ತಾತ್ಕಾಲಿಕ ನಿಷೇಧ

ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…

1 day ago