Advertisement
ಸುದ್ದಿಗಳು

ದುಗಲಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ

Share

ದುಗಲಡ್ಕ:ಮಿತ್ರ ಯುವಕ ಮಂಡಲ ಕೊಯಿಕುಳಿ ಮತ್ತು ಕುರಲ್ ತುಳುಕೂಟ ದುಗಲಡ್ಕ ಇವರ ಆಶ್ರಯದಲ್ಲಿ 28ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಕೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳು ಆ.23ರಂದು ದುಗಲಡ್ಕ ಪ್ರೌಢಶಾಲಾ ಮೈದಾನದಲ್ಲಿ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆ ಯನ್ನು ಸುಳ್ಯ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಕೆ.ಸಿ.ನಾರಾಯಣ ಗೌಡ ನೆರವೇರಿಸಿದರು. ಮಿತ್ರ ಯುವಕ ಮಂಡಲದ ಅಧ್ಯಕ್ಷ ದಿನೇಶ್ ಕೊಯಿಕುಳಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿ ಯಾಗಿ ದುಗಲಡ್ಕ ಪ್ರೌಢಶಾಲಾ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ಎ.ಯು.ಮಂಗಳೂರಿನಲ್ಲಿ ಉದ್ಯಮಿಯಾಗಿರುವ ರಮೇಶ್ ಪಿ.ಕಾಮತ್, ನಗರ ಪಂಚಾಯತ್ ಸದಸ್ಯ ಬಾಲಕೃಷ್ಣ ರೈ ದುಗಲಡ್ಕ, ಸುಳ್ಯ ವೆಂಕಟರಮಣ ಸೊಸೈಟಿ ಉಪಾಧ್ಯಕ್ಷ ಪಿ.ಎಸ್.ಗಂಗಾಧರ್, ಕುರಲ್ ತುಳುಕೂಟದ ಗೌರವಾಧ್ಯಕ್ಷ ಸಿರಿಲ್ ಡಿ ಸೋಜಾ ,ಈಶ್ವರಿಯಾ ವಿಶ್ವ ವಿದ್ಯಾಲಯದ ಬ್ರಹ್ಮ ಕುಮಾರಿ ಉಮಾದೇವಿ, ಸುಳ್ಯ ರೋಟರ್ಯಾಕ್ಟ್ ಅಧ್ಯಕ್ಷ ಮೋಹಿತ್ ಹರ್ಲಡ್ಕ ಭಾಗವಹಿಸಿದರು. ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಅಧ್ಯಕ್ಷ ನಾರಾಯಣ ಟೈಲರ್, ಯುವಕ ಮಂಡಲದ ಪ್ರ.ಕಾರ್ಯದರ್ಶಿ ಅಕ್ಷಯ್ ಮೂಡೆಕಲ್ಲು, ಕೋಶಾಧಿಕಾರಿ ಚಿದಾನಂದ ಕೊಯಿಕುಳಿ ಉಪಸ್ಥಿತರಿದ್ದರು. ರೋಹಿತ್ ಎಸ್.ಎನ್.ಪ್ರಾರ್ಥಿಸಿ, ಯುವಕ ಮಂಡಲದ ಗೌರವಾಧ್ಯಕ್ಷ ಭವಾನಿಶಂಕರ ಕಲ್ಮಡ್ಕ ಸ್ವಾಗತಿಸಿ, ತುಳುಕೂಟದ ಕೋಶಾಧಿಕಾರಿ ಮನೋಜ್ ಪಾನತ್ತಿಲ ವಂದಿಸಿದರು. ರಮೇಶ್ ನೀರಬಿದಿರೆ ಕಾರ್ಯಕ್ರಮ ನಿರೂಪಿಸಿದರು. ಅತಿಥಿಗಳಿಗೆ ಪರಿಸರ ಕಾಳಜಿಯ ಸಲುವಾಗಿ ಗಿಡಗಳನ್ನು ನೀಡಲಾಯಿತು.
ಬಳಿಕ ಮಕ್ಕಳಿಗೆ, ಸ್ಥಳೀಯರಿಗೆ,ಸಾರ್ವಜನಿಕರಿಗೆ ವಿವಿಧ ಆಟೋಟ ಸ್ಪರ್ಧೆಗಳು ನಡೆಯಿತು.ಸಂಜೆ ನಡೆದ ಸಮಾರೋಪ ಸಮಾರಂಭ ನಡೆಯಿತು. ಸುಳ್ಯ ದ ಭಗವಾನ್ ಕನ್ ಸ್ಟ್ರಕ್ಷನ್ ಮಾಲಕ ಕೆ.ಎಸ್.ಗೋಪಾಲಕೃಷ್ಣ ಕರೋಡಿ ಬಹುಮಾನ ವಿತರಣೆ ಮಾಡಿದರು.ಕುರಲ್ ತುಳುಕೂಟದ ಅಧ್ಯಕ್ಷ ನಾರಾಯಣ ಟೈಲರ್ ಅಧ್ಯಕ್ಷತೆ ವಹಿಸಿದ್ದರು. ಸುಳ್ಯ ನಗರ ಪಂಚಾಯತ್ ಸದಸ್ಯ ಎಂ.ವೆಂಕಪ್ಪ ಗೌಡ ,ಹಿರಿಯ ವೈದ್ಯಾಧಿಕಾರಿ ಡಾ.ನಂದಕುಮಾರ್ ಬಿ. ದುಗಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಕೆ.ಯಂ.ಹಸೈನಾರ್ ಕೊಳಂಜಿಕೋಡಿ, ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಬೀಟ್ ಪೋಲಿಸ್ ಮಹೇಶ್ ಕುಮಾರ್ ಮತ್ತು ಆರಕ್ಷಕ ಸಿಬ್ಬಂದಿ ಲೋಕೇಶ್ ಉಪಸ್ಥಿತರಿದ್ದರು.ಕುರಲ್ ತುಳುಕೂಟದ ಸಂಚಾಲಕ ಕೆ.ಟಿ.ವಿಶ್ವನಾಥ, ಯುವಕ ಮಂಡಲ ಅಧ್ಯಕ್ಷ ದಿನೇಶ್ ಕೊಯಿಕುಳಿ ಮತ್ತು ಪದಾಧಿಕಾರಿಗಳು ವೇದಿಕೆಯಲ್ಲಿ ಇದ್ದರು.
ಮನೋಜ್ ಪಾನತ್ತಿಲ ಸ್ವಾಗತಿಸಿ, ರಮೇಶ್ ನೀರಬಿದಿರೆ ಬಹುಮಾನ ವಿಜೇತರ ಪಟ್ಟಿ ವಾಚಿಸಿ, ವಂದಿಸಿದರು. ಸಿರಿಲ್ ಡಿ.ಸೋಜಾ ಕಾರ್ಯಕ್ರಮ ನಿರೂಪಿಸಿದರು. ಮುಕ್ತ ಕಬಡ್ಡಿ ಪಂದ್ಯಾಟದಲ್ಲಿ ಎಸ್.ಎಫ್.ಸಿ.ಕೂಟೇಲು ಪ್ರಥಮ ಹಾಗೂ ಮುತ್ತು ಶ್ರೀ ಕಂದಡ್ಕ ದ್ವಿತೀಯ ಬಹುಮಾನ ಪಡೆದುಕೊಂಡರು. ಕಾರ್ಯಕ್ರಮದಲ್ಲಿ ಎಲ್ಲಾ ಧರ್ಮದವರು ಭಾಗವಹಿಸಿದರು.

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭ – ಮಹಿಳೆಯರ ನೇತೃತ್ವದಲ್ಲಿ ಗ್ರಾಮೀಣ ಉದ್ಯಮಕ್ಕೆ ಹೊಸ ದಿಕ್ಕು

ಸುಳ್ಯದ ಗುತ್ತಿಗಾರಿನಲ್ಲಿ ಮಹಿಳೆಯರ ನೇತೃತ್ವದಲ್ಲಿ ಗೇರು ಹಣ್ಣಿನ ಜ್ಯೂಸ್‌ ಘಟಕ ಆರಂಭವಾಗಿದೆ. ಮೌಲ್ಯವರ್ಧನೆಯ…

20 hours ago

ಅಡಿಕೆ ಎಲೆಚುಕ್ಕೆ ರೋಗದ ವಿರುದ್ಧ ಹೋರಾಟ – ಸಮುದಾಯ ಮಟ್ಟದಲ್ಲಿ ಕ್ರಿಯಾ ಯೋಜನೆಗೆ ಸಂಸದ ಬ್ರಿಜೇಶ್ ಚೌಟ ಕರೆ

ಗುತ್ತಿಗಾರಿನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಸಮುದಾಯದ…

21 hours ago

ಹವಾಮಾನ ವರದಿ | 28-04-2026 | ಎಪ್ರಿಲ್ 29ರಿಂದ ಕರ್ನಾಟಕದಲ್ಲಿ ಮಳೆ ಚುರುಕು! ಕರಾವಳಿ–ಮಲೆನಾಡಿನಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

29.04.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆಯ ಪ್ರಕಾರ ರಾಜ್ಯದಲ್ಲಿ ತಾಪಮಾನ…

2 days ago

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

3 days ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

3 days ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

4 days ago