ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…