ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?