ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಅಡಿಕೆ ಹಾಳೆತಟ್ಟೆ ಅಮೇರಿಕಾದಲ್ಲಿ ನಿಷೇಧ ಹೇರಲಾಗುತ್ತಿದೆ. ಹೀಗಾಗಿ ಭಾರತದಿಂದ ಸದ್ಯ ಅಮೇರಿಕಾಕ್ಕೆ ಹಾಳೆತಟ್ಟೆ…
ಈಗಿನ ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಂಡಾಗ ಕಂಡು ಬರುವ ವಿಚಾರವೆಂದರೆ ಅಡಿಕೆಗೆ ಈಗ…
ಗಾಳಿಯ ಯದ್ವಾತದ್ವಾ ಚಲನೆಯ ಕಾರಣದಿಂದ ನಿರ್ದಿಷ್ಟ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ ಅಂತ ಹೇಳಲು ಸಾಧ್ಯವಿಲ್ಲ.…
ಅರಣ್ಯ ಉಳಿದರಷ್ಟೇ ಮಾನವ ಉಳಿಯಲು ಸಾಧ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ…
ಮುಂಬರುವ ಜೂನ್ 30 ರೊಳಗಾಗಿ ಜಿಲ್ಲೆಯಲ್ಲಿ ಬಾಕಿ ಇರುವ ಕಂದಾಯ ಗ್ರಾಮಗಳ ರಚನೆಗೆ…
ಹೆಚ್ಚಿನ ವೈಯಕ್ತಿಕ ಸಲಹೆಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490