ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಮಿಜೋರಾಂದ ಚಾಂಫೈ ಜಿಲ್ಲೆಯಲ್ಲಿ ₹54.88 ಲಕ್ಷ ಮೌಲ್ಯದ 98 ಚೀಲ ಅಡಿಕೆ ವಶಪಡಿಸಲಾಗಿದೆ.…
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಏಪ್ರಿಲ್ 19ರಿಂದ ಮಳೆ ಆರಂಭವಾಗುವ ಲಕ್ಷಣಗಳು ಗೋಚರಿಸುತ್ತಿವೆ.…
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…