ಸುಳ್ಯ: ವಿದೇಶದಿಂದ ಬಂದಿಳಿದ ಯುವಕನೋರ್ವ ಆಸ್ಪತ್ರೆಗೆ ತೆರಳಿ ರೋಗಿಯೋರ್ವರಿಗೆ ರಕ್ತದಾನ ಮಾಡಿ ಮಾನವೀಯತೆ ಮೆರೆದ ಘಟನೆ ಇಂದು ಮುಂಜಾನೆ ನಡೆದಿದೆ. ಕನಕಮಜಲು ಸಮೀಪದ ಸುಣ್ಣಮೂಲೆಯ ಸಫ್ವಾನ್ ರಕ್ತದಾನದ ಮಾಡಿದ ಯುವಕ. ವಿಖಾಯ ರಕ್ತದಾನಿ ಬಳಗದ ಸದಸ್ಯನಾಗಿರುವ ಸಫ್ವಾನ್ ಇಂದು ಬೆಳಿಗ್ಗೆ ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದು ಮನೆಗೆ ಆಗಮಿಸಿದ್ದರು. ಬಳಗದ ವಾಟ್ಸಾಪ್ ಗ್ರೂಪ್ ನಲ್ಲಿ ‘ಒ ಪಾಸಿಟಿವ್’ ರಕ್ತದ ಬೇಡಿಕೆ ಕಂಡುಬಂದಾಗ ಮನೆಗೆ ಬಂದು ಕೆವಿಜಿ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ತೆರಳಿ ರಕ್ತದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.
ಇವರು ಸುಣ್ಣಮೂಲೆ ಎಸ್.ಕೆ.ಎಸ್.ಎಸ್.ಎಫ್ ನ ಅಧ್ಯಕ್ಷರೂ, ವಿಖಾಯ ರಕ್ತದಾನಿ ಬಳಗ ಸುಳ್ಯ ಇದರ ಸಕ್ರಿಯ ಸದಸ್ಯರೂ ಆಗಿದ್ದಾರೆ.
ವಿಖಾಯ ಸುಳ್ಯ ರಕ್ತದಾನಿ ಬಳಗದ ಇನ್ನೊಬ್ಬ ಸದಸ್ಯ ಫಝಲ್ ರವರೂ ಕೂಡಾ ಇಂದು ಸುಳ್ಯ ಕೆವಿಜಿ ಆಸ್ಪತ್ರೆಯಲ್ಲಿ ರಕ್ತದಾನ ಮಾಡಿದ್ದಾರೆ.
ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…
ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…
ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯ…
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…