ಪ್ರಿಯಾ. ಡಿ
ಪುತ್ತೂರು: ಇಲ್ಲಿನ ವಿವೇಕಾನಂದ ಕಾಲೇಜಿನ ತೃತೀಯ ಬಿಎಸ್ಸಿ ವಿದ್ಯಾರ್ಥಿನಿ ಜೂನಿಯರ್ ಅಂಡರ್ ಆಫೀಸರ್ ಪ್ರಿಯಾ ಡಿ. ಅವರು ಜ.26ರಂದು ದೆಹಲಿಯ ರಾಜಪಥ್ನಲ್ಲಿ ನಡೆಯಲಿರುವ ಗಣರಾಜ್ಯೋತ್ಸವದ ಪಥ ಸಂಚಲನಕ್ಕೆ ಆಯ್ಕೆಯಾಗಿದ್ದಾರೆ. ಹಾಗೆಯೇ ಕಾಲೇಜಿನ ದ್ವಿತೀಯ ಬಿಎಸ್ಸಿ ವಿದ್ಯಾರ್ಥಿನಿ ಸಾರ್ಜಂಟ್ ಅಂಕಿತ ವಿ.ಕೆ. ಅವರು ಜ.27ರಂದು ದೆಹಲಿಯಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ರಾಷ್ಟ್ರೀಯ ತಂಡಕ್ಕೆ ಆಯ್ಕೆಯಾಗಿದ್ದಾರೆ.
ಇಬ್ಬರು ಎನ್ಸಿಸಿ ಕೆಡೆಟ್ಗಳು ಅಕ್ಟೋಬರ್ನಿಂದ ಜನವರಿಯವರೆಗೆ ದೇಶದ ವಿವಿಧೆಡೆ ನಡೆದ ಎಂಟು ಪೂರ್ವ ಸಿದ್ಧತಾ ಸುತ್ತನ್ನು ಯಶಸ್ವಿಯಾಗಿ ಪೂರೈಸಿ ಕರ್ನಾಟಕ ಮತ್ತು ಗೋವಾ ಡೈರಕ್ಟರೇಟ್ನ ಮಡಿಕೇರಿ ಬೆಟಾಲಿಯನ್ನ ಪ್ರತಿನಿಧಿಗಳಾಗಿ ಪ್ರಧಾನಿಯವರು ಭಾಗವಹಿಸುವ ಗಣರಾಜ್ಯೋತ್ಸವದಲ್ಲಿ ಭಾಗವಹಿಸಲಿದ್ದಾರೆ.
ಪ್ರಿಯಾ ಡಿ. ಅವರು ಕನ್ಯಾನ ನಿವಾಸಿ ನಿವೃತ್ತ ಸೇನಾನಿ ರಾಮ ಡಿ. ಮತ್ತು ಹೇಮಾ ಡಿ. ದಂಪತಿ ಪುತ್ರಿಯಾಗಿದ್ದಾರೆ. ಅಂಕಿತ ವಿ.ಕೆ. ಅವರು ಬಲ್ನಾಡು ನಿವಾಸಿ ಪೊಲೀಸ್ ಉದ್ಯೋಗಿ ಕೃಷ್ಣಪ್ಪ ಗೌಡ ಬಿ. ಮತ್ತು ಶಿಕ್ಷಕಿ ಹರಿಣಾಕ್ಷಿ ಎ. ದಂಪತಿ ಪುತ್ರಿಯಾಗಿದ್ದಾರೆ.
ಕಾಲೇಜಿನ ಎನ್ಸಿಸಿ ಅಧಿಕಾರಿ ಲೆಫ್ಟಿನೆಂಟ್ ಅತುಲ್ ಶೆಣೈ ಅವರು ಈ ಕೆಡೆಟ್ಗಳಿಗೆ ವಿವಿಧ ಹಂತದಲ್ಲಿ ಮಾರ್ಗದರ್ಶನವನ್ನು ನೀಡಿದ್ದಾರೆ ಎಂದು ಕಾಲೇಜಿನ ಪ್ರಕಟನೆ ತಿಳಿಸಿದೆ.
ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…
ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…
ಚಾಮರಾಜನಗರ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಹುಲಿ-ಚಿರತೆ ಹಾವಳಿಯಿಂದ ಕೃಷಿ ಚಟುವಟಿಕೆಗಳಿಗೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತ…
ಯಾದಗಿರಿ ಜಿಲ್ಲೆಯಲ್ಲಿ ಮುಂಗಾರು ದುರ್ಬಲವಾಗಿರುವ ಹಿನ್ನೆಲೆಯಲ್ಲಿ ತೇವಾಂಶ ಸಂರಕ್ಷಣೆ, ಬೀಜೋಪಚಾರ ಹಾಗೂ ಕಡಿಮೆ…
ಬ್ರಿಟನ್ನಲ್ಲಿ ಮೇ–ಜೂನ್ ಉಷ್ಣ ಅಲೆಗಳಿಂದ 2,700ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಸಾವುಗಳಲ್ಲಿ…
ನೈಸರ್ಗಿಕ ಕೃಷಿ ಮತ್ತು ಕೃಷಿ ತಂತ್ರಜ್ಞಾನ ಅಭಿವೃದ್ಧಿಗೆ ರಾಜಸ್ಥಾನ ಸರ್ಕಾರ 32 ಸಂಸ್ಥೆಗಳೊಂದಿಗೆ…