ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಬೆಳಗಾವಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುರಿಯುತ್ತಿರುವ ಧಾರಾಕಾರ ಮಳೆ ಹಾಗೂ ಮಹಾರಾಷ್ಟ್ರದ…
ಪುತ್ತೂರಿನ ಶ್ರೀ ಲಕ್ಷ್ಮೀವೆಂಕಟ್ರಮಣ ದೇವಸ್ಥಾನ ಹಾಗೂ ಕುರಿಯ ವಿಠಲ ಶಾಸ್ತ್ರಿ ಸಾಂಸ್ಕೃತಿಕ ಪ್ರತಿಷ್ಠಾನ …
ಬೆಳೆಗಾರರು ಸಹಕಾರಿ ಸಂಸ್ಥೆಗಳು ಮತ್ತು ಬೆಳೆಗಾರದ್ದೇ ಆದ ಇತರ ಸಂಸ್ಥೆಗಳ ಮೂಲಕ ವ್ಯವಹಾರ…
ಹವಾಮಾನ ಆಧರಿತ ಬೆಳೆ ವಿಮಾ ಯೋಜನೆ ಜಾರಿಯಾಗಿ ವರ್ಷಗಳು ಕೆಲವು ಉರುಳಿದವು. ಇಂದಿಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ತೋಟಗಾರಿಕೆ ಬೆಳೆ ಬೆಳೆದ ರೈತರು ಹವಾಮಾನ ವೈಪರೀತ್ಯದಿಂದ ಬೆಳೆ ನಷ್ಟ ಸಂಭವಿಸಿದಲ್ಲಿ ನಷ್ಟ…