ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಮಳೆಯ ಕೊರತೆಯಿಂದ ದೇಶದ ಜಲಾಶಯಗಳ ನೀರಿನ ಮಟ್ಟ ಕುಸಿದಿರುವುದು ಬೇಸಿಗೆ ತಿಂಗಳುಗಳಲ್ಲಿ ನೀರಿನ…
ಭಾರತ ಮತ್ತು ಬ್ರೆಜಿಲ್ ನಡುವೆ ಕೃಷಿ ಕ್ಷೇತ್ರದಲ್ಲಿ ಸಹಕಾರವನ್ನು ಮತ್ತಷ್ಟು ಬಲಪಡಿಸಲು ಮಹತ್ವದ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…