ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…