ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…
ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…
ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…
ಕೊಪ್ಪರ ಬೆಲೆಯ ಏರಿಳಿತದಿಂದ ತುಮಕೂರಿನಲ್ಲಿ ರೈತರು ಅಡಿಕೆ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಇದರ…
ಜುಲೈ 20ರಿಂದ ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ಪ್ರಮಾಣ ಇಳಿಮುಖವಾಗುವ ಲಕ್ಷಣಗಳಿವೆ. ಉತ್ತರ…
ಹಲಸಿನ ಬೀಜದ ಸಿಪ್ಪೆಯಿಂದ ಮೈಕ್ರೋಕ್ರಿಸ್ಟಲೈನ್ ಸೆಲ್ಯುಲೋಸ್ ಉತ್ಪಾದಿಸುವಲ್ಲಿ ವಿಜ್ಞಾನಿಗಳು ಯಶಸ್ವಿಯಾಗಿದ್ದಾರೆ. ಕೃಷಿ ತ್ಯಾಜ್ಯವನ್ನು…