ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…