ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…