ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ಮಿಲ್ಲೆಟ್ಸ್ ಬೆಳೆಯ ಕಾರಣದಿಂದ ನೀರಿನ ಸಂರಕ್ಷಣೆ, ಪರಿಸರ ಅಭಿವೃದ್ಧಿ, ಕೃಷಿ ಉಳಿಸುವ, ಮಣ್ಣಿನ…
ಮೇ 7 ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆ…
ನಿನ್ನೆ ನನ್ನ ಬಂಧುಗಳ ಮನೆಯ ಸಮಾರಂಭದಲ್ಲಿ ಭಾಗವಹಿಸಿ ಮನೆಗೆ ಮರಳಿ ಬರುವಾಗ ಮಾರ್ಗ…
ಸತತವಾಗಿ ತಾಪಮಾನ 40 ಡಿಗ್ರಿ ದಾಟಿದ ಕಾರಣ ಅಡಿಕೆ ಬೆಳೆಗೆ ಸಮಸ್ಯೆಯಾಗಿದೆ. ಎಳೆ…
ಮೇ 6 ಅಥವಾ 7ರಿಂದ ದಕ್ಷಿಣ ಒಳನಾಡು ಭಾಗಗಳಲ್ಲಿ ಅಲ್ಲಲ್ಲಿ ಮಳೆಯ ಮುನ್ಸೂಚನೆ…
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…