ನವದೆಹಲಿ: ದೆಹಲಿ ವಿಧಾನ ಸಭೆ ಚುನಾವಣೆಯ ಬಳಿಕ ಇದೀಗ ಕಳೆದ 24 ಗಂಟೆಯಲ್ಲಿ ಆಮ್ ಆದ್ಮೀ ಪಕ್ಷಕ್ಕೆ 10 ಲಕ್ಷಕ್ಕಿಂತಲೂ ಅಧಿಕ ಮಂದಿ ಸೇರ್ಪಡೆಗೊಂಡಿದ್ದಾರೆ ಎಂದು ಎಎಪಿ ಹೇಳಿದೆ.
ದೆಹಲಿ ಚುನಾವಣೆ ಘೋಷಣೆಯಾದ ಬಳಿಕ ಎಎಪಿ ನಾಯಕರು ಪಕ್ಷ ಸೇರ್ಪಡೆ ಅಭಿಯಾನ ಆರಂಭಿಸಿದ್ದರು. ಇದಕ್ಕಾಗಿ ಆರಂಭಿಸಲಾಗಿದ್ದ ಮಿಸ್ಡ್ ಕಾಲ್ ಅಭಿಯಾನಕ್ಕೆ ಇದೀಗ ಅಭೂತಪೂರ್ವ ಬೆಂಬಲ ದೊರೆತಿದೆ ಎಂದು ಎಎಪಿ ಹೇಳಿಕೊಂಡಿದೆ. ತನ್ನ ಮಿಸ್ಡ್ ಕಾಲ್ ನೀಡುವ ಅಭಿಯಾನದಲ್ಲಿ ಸುಮಾರು 11 ಲಕ್ಷ ಜನರು ಪಾಲ್ಗೊಂಡಿದ್ದಾರೆ. ವಿವಿಧ ಮಾಧ್ಯಮಗಳ ಮೂಲಕ ಮಿಸ್ಡ್ ಕಾಲ್ ನೀಡಲು ನಂಬರ್ ನೀಡಲಾಗಿತ್ತು. ದೇಶ ಕಟ್ಟಲು ದೇಶಾದ್ಯಂತದ ಜನರು ನೀಡಿದ ಬೆಂಬಲ ಚಾರಿತ್ರಿಕ ವಿಚಾರ ಎಂದು ಪಕ್ಷದ ನಾಯಕರು ಹೇಳಿದ್ದಾರೆ ಎಂದು ಎಎಪಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಇನ್ನು ಕಳೆದ ದೆಹಲಿ ಚುನಾವಣೆಯಲ್ಲಿ ಆಮ್ ಆದ್ಮೀ ಪಕ್ಷ ಅಭೂತ ಪೂರ್ವ ಗೆಲುವು ಸಾಧಿಸಿತ್ತು. ಒಟ್ಟು 70 ಕ್ಷೇತ್ರಗಳ ಪೈಕಿ 63 ಕ್ಷೇತ್ರಗಳನ್ನು ತನ್ನದಾಗಿಸಿಕೊಂಡು ಸತತ ಮೂರನೇ ಬಾರಿಗೆ ಅಧಿಕಾರದ ಗದ್ದುಗೆ ಹಿಡಿದಿದೆ. ಇದೀಗ ದೇಶದಾದ್ಯಂತ ಎಎಪಿ ತನ್ನ ಪ್ರಚಾರ ಕಾರ್ಯ ಆರಂಭಿಸುತ್ತಿದೆ.
ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…
ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…
ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…
ಬಿ.ಎಸ್ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…
ಮಧ್ಯಪ್ರದೇಶದಲ್ಲಿ ಹೊಸ ತಿರುವಿಕೆ ಪರಿಣಾಮ: ಕರಾವಳಿ, ಮಲೆನಾಡಿನಲ್ಲಿ ಮಳೆ ಚುರುಕು ಸಾಧ್ಯತೆ ಕರ್ನಾಟಕದ…