ದೆಹಲಿ ಪೊಲೀಸ್ ಕಮಿಷನರ್ ಆಗಿ ಶ್ರೀವಾತ್ಸವ್ ನೇಮಕ

February 28, 2020
12:31 PM

ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.

Advertisement

ಹಗಲಿರುಳು ಶ್ರಮಿಸುತ್ತಿರುವ  ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.

ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.

ಎಸ್​ಎನ್​ ಶ್ರೀವಾಸ್ತವ್​ ಅವರು 1985ರ ಅರುಣಾಚಲ್​ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್​ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್​ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್​ಎಫ್​ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್​ ಯುನಿಟ್​ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ

Advertisement

Advertisement
Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಗಣಿಯಿಂದ 5500 ಕಿಮೀ ಮಾಲಿನ್ಯ ರಹಿತ ಪ್ರಯಾಣ..!
August 14, 2025
7:39 AM
by: ವಿಶೇಷ ಪ್ರತಿನಿಧಿ
ಅಕ್ರಮ ಅಡಿಕೆ ಸಾಗಾಟ ಪತ್ತೆ | 466 ಚೀಲ ಅಡಿಕೆ ವಶಕ್ಕೆ ಪಡೆದ ಅಸ್ಸಾಂ ರೈಫಲ್ಸ್‌
August 13, 2025
11:03 PM
by: ದ ರೂರಲ್ ಮಿರರ್.ಕಾಂ
ರಾಜಸ್ಥಾನದ 30 ಲಕ್ಷ ರೈತರಿಗೆ ಬೆಳೆ ವಿಮೆ ಪರಿಹಾರ | ರೈತರ ಬ್ಯಾಂಕ್ ಖಾತೆಗಳಿಗೆ ನೇರ ಜಮೆ
August 12, 2025
7:56 AM
by: The Rural Mirror ಸುದ್ದಿಜಾಲ
ಉತ್ತರಕಾಶಿಯ ಮೇಘಸ್ಫೋಟದಿಂದ ಭಾರಿ ಪ್ರವಾಹ | ಶೋಧ, ರಕ್ಷಣಾ ಕಾರ್ಯ ಮುಂದುವರಿಕೆ
August 8, 2025
10:44 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group