ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.
ಹಗಲಿರುಳು ಶ್ರಮಿಸುತ್ತಿರುವ ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.
ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಎಸ್ಎನ್ ಶ್ರೀವಾಸ್ತವ್ ಅವರು 1985ರ ಅರುಣಾಚಲ್ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್ಎಫ್ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್ ಯುನಿಟ್ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?
ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಸ್ಥೂಲಕಾಯತೆ ಗಂಭೀರತೆ ಕುರಿತು ಪ್ರಸ್ತಾಪಿಸಿ, ಆರೋಗ್ಯಪೂರ್ಣ ಮತ್ತು…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ…
ಈಗಿನಂತೆ ಫೆಬ್ರವರಿ 28ರಿಂದ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.