ನವದೆಹಲಿ: ಸಿಎಎ ದಂಗೆಯಿಂದಾಗಿ ರಾಜಧಾನಿ ನವದೆಹಲಿ ಅಕ್ಷರಶ: ಹೊತ್ತಿ ಉರಿಯುತ್ತಿದೆ. ಸಿಎಎ ಪರ ಹಾಗೂ ವಿರೋಧಿ ಗುಂಪುಗಳು ನಡೆಸಿರುವ ಗಲಭೆಯಿಂದ ದೆಹಲಿ ಜನತೆ ತತ್ತರಿಸಿ ಹೋಗಿದ್ದಾರೆ. ದಂಗೆಕೋರರ ದಾಳಿಗೆ ಇದುವರೆಗೂ 38 ಜೀವಗಳು ಬಲಿಯಾಗಿವೆ.
ಹಗಲಿರುಳು ಶ್ರಮಿಸುತ್ತಿರುವ ದೆಹಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಬಹುತೇಕ ಯಶಸ್ವಿಯಾಗಿದ್ದಾರೆ. ಈ ಮಧ್ಯೆ ದೆಹಲಿ ಪೊಲೀಸ್ ಕಮಿಷನರ್ ಅಮುಲ್ಯಾ ಪಟ್ನಾಯಕ್ ಫೆ.29ರಂದು ಸೇವೆಯಿಂದ ನಿವೃತ್ತಿ ಹೊಂದಲಿದ್ದು, ಅವರ ಜಾಗಕ್ಕೆ ಕಾನೂನು ಮತ್ತು ಸುವ್ಯವಸ್ಥೆ ಕಮಿಷನರ್ ಎಸ್. ಎನ್. ಶ್ರೀವಾತ್ಸವ್ ಅವರನ್ನು ದೆಹಲಿಯ ನೂತನ ಪೊಲೀಸ್ ಕಮಿಷನರ್ ಆಗಿ ನೇಮಿಸಲಾಗಿದೆ.
ಕೇಂದ್ರ ಗೃಹ ಇಲಾಖೆ, ಎಸ್.ಎನ್. ಶ್ರೀವಾತ್ಸವ್ ನಾಳೆಯಿಂದಲೇ ದೆಹಲಿ ಪೊಲೀಸ್ ಕಮಿಷನರ್ ಆಗಿ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಸ್ಪಷ್ಟಪಡಿಸಿದೆ.
ಎಸ್ಎನ್ ಶ್ರೀವಾಸ್ತವ್ ಅವರು 1985ರ ಅರುಣಾಚಲ್ ಪ್ರದೇಶ-ಗೋವಾ-ಮಿಜೋರಾಂನ ಬ್ಯಾಚ್ಗಳ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು. ಕೇಂದ್ರಾಡಳಿತ ಪ್ರದೇಶದ ಕೇಡರ್ ಅಧಿಕಾರಿಯಾಗಿಯೂ ಸೇವ ಸಲ್ಲಿಸಿದ್ದಾರೆ. ಸಿಪಿಆರ್ಎಫ್ನಲ್ಲಿ ಕಾರ್ಯ ನಿರ್ವಹಿಸಿರುವ ಅನುಭವವಿರುವ ಇವರು ದೆಹಲಿಯಲ್ಲಿ ಅನೇಕ ಪೊಲೀಸ್ ಯುನಿಟ್ಗಳ ಜತೆ ಕಾರ್ಯಾಚರಣೆ ಮಾಡಿದ್ದಾರೆ
ಭಾರತದ ರಾಷ್ಟ್ರೀಯ ಕೀಟ ಕಣ್ಗಾವಲು ವ್ಯವಸ್ಥೆ ಈಗ 73 ಬೆಳೆಗಳು ಮತ್ತು 436…
ICAR 16 ಹೊಸ ಜಾನುವಾರು ಮತ್ತು ನಾಯಿ ತಳಿಗಳಿಗೆ ರಾಷ್ಟ್ರೀಯ ನೋಂದಣಿ ನೀಡಿದ್ದು,…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 26ರವರೆಗೆ ಮೋಡ ಮತ್ತು ಅಲ್ಲಲ್ಲಿ ಬಿಟ್ಟುಬಿಟ್ಟು…
ಭಾರತದಲ್ಲಿ ಸಮಸ್ಯೆ ಕೇವಲ ಉದ್ಯೋಗಗಳ ಕೊರತೆಯಲ್ಲ, ಉದ್ಯೋಗಕ್ಕೆ ಅಗತ್ಯವಾದ ಕೌಶಲ್ಯ ಹೊಂದಿದ ಅಭ್ಯರ್ಥಿಗಳ…
ಕರಾವಳಿ ಮತ್ತು ಮಲೆನಾಡಿನ ಅಡಿಕೆ ತೋಟಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಎಲೆಚುಕ್ಕೆ, ಹಳದಿ ಎಲೆ ಹಾಗೂ…
ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕಾಗಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 25ರವರೆಗೆ ಮಳೆ…