ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.
ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.
ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.
ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…