ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.
ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.
ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.
ಕರ್ನಾಟಕದಲ್ಲಿ ಮಳೆ ಕೊರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೂರ್ಣಾವಧಿ ಕೃಷಿ ಸಚಿವರನ್ನು ತಕ್ಷಣ ನೇಮಿಸಬೇಕು…
ವಿಶ್ವ ಯೋಗ ದಿನದ ಅಂಗವಾಗಿ ಕ್ಯಾಂಪ್ಕೊ ಚಾಕಲೇಟ್ ಕಾರ್ಖಾನೆ ಉದ್ಯೋಗಿಗಳ ರಿಕ್ರಿಯೇಷನ್ ಸೆಂಟರ್…
ದೇಶದಲ್ಲಿ ಮುಂಗಾರು ಮಳೆ ಕೊರತೆ 40%ಕ್ಕೆ ಏರಿಕೆಯಾಗಿದ್ದು, ಪ್ರಮುಖ ಕೃಷಿ ಪ್ರದೇಶಗಳಲ್ಲಿ ಮೋಡಗಳ…
ಕೇರಳ ಸರ್ಕಾರ ರಬ್ಬರ್ ಬೆಂಬಲ ಬೆಲೆಯನ್ನು ₹200ರಿಂದ ₹250ಕ್ಕೆ ಹೆಚ್ಚಿಸಿದೆ. ಮಾರುಕಟ್ಟೆ ಬೆಲೆ…
ಮೂರು ವರ್ಷಗಳಲ್ಲಿ ದೇಶದ ಅರಣ್ಯ ಪ್ರದೇಶಗಳಲ್ಲಿ 28 ಲಕ್ಷಕ್ಕೂ ಹೆಚ್ಚು ಮರಗಳನ್ನು ಕಡಿಯಲು…
ಜೂನ್ 30ರೊಳಗೆ LPG e-KYC ಪೂರ್ಣಗೊಳಿಸುವಂತೆ ಗ್ರಾಹಕರಿಗೆ ಸೂಚನೆ ನೀಡಲಾಗಿದೆ. e-KYC ಬಾಕಿ…