Advertisement
ಸಾಂಸ್ಕೃತಿಕ

ದೇಲಂಪಾಡಿಯಲ್ಲಿ ತಾಳಮದ್ದಳೆ

Share

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.

ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.

ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

18 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago