ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ ವಿಷ್ಣುಶರಣ ಬನಾರಿ ಅವರ ವತಿಯಿಂದ ವಿಶೇಷ ಯಕ್ಷಗಾನ ತಾಳಮದ್ದಳೆ ಕಲಾಸೇವೆಯು ಶ್ರೀ ಗೋಪಾಲಕೃಷ್ಣ ದೇವರ ಪೂಜೆಯೊಂದಿಗೆ ನೆರವೇರಿತು.
ಕೀರಿಕ್ಕಾಡು ವನಮಾಲ ಕೇಶವ ಭಟ್ಟರ ಹಿರಿತನದಲ್ಲಿ ಜರಗಿದ “ದಾನಶೂರ ಕರ್ಣ” ಯಕ್ಷಗಾನ ತಾಳಮದ್ದಳೆಯ ಕಾರ್ಯಕ್ರಮದಲ್ಲಿ ಸರೋಜಿನಿ ಬನಾರಿ ಅವರು ಸ್ವಾಗತಿಸಿದರು. ಭಾಗವತರಾಗಿ ವಿಶ್ವವಿನೋದ ಬನಾರಿ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆಮದ್ದಳೆ ವಾದನದಲ್ಲಿ ಕಲ್ಲಡ್ಕ ಶಿವರಾಮ ಕಲ್ಲೂರಾಯ, ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ನಾರಾಯಣ ಪಾಟಾಳಿ ಮಯ್ಯಾಳ, ಸದಾನಂದ ಮಯ್ಯಾಳ, ವಿಷ್ಣುಶರಣ ಬನಾರಿ ಭಾಗವಹಿಸಿದರು. ರಾಮನಾಯ್ಕ ದೇಲಂಪಾಡಿ ಅವರು ಚಕ್ರತಾಳ ನುಡಿಸಿದರು.
ಅರ್ಥಧಾರಿಗಳಾಗಿ ಕೀರಿಕ್ಕಾಡು ಗಣೇಶ ಶರ್ಮ ಸಿದ್ಧಕಟ್ಟೆ (ಕರ್ಣ), ನಾರಾಯಣ ದೇಲಂಪಾಡಿ (ಅರ್ಜುನ 1ನೇ ಭಾಗ), ಎ.ಜಿ ಮುದಿಯಾರು (ಅರ್ಜುನ 2ನೇ ಭಾಗ), ಕಲ್ಲಡ್ಕ ಗುತ್ತು ರಾಮಯ್ಯ ರೈ (ಶ್ರೀಕೃಷ್ಣ 1ನೇ ಭಾಗ), ರಾಮಣ್ಣ ಮಾಸ್ತರ್ ದೇಲಂಪಾಡಿ (ಶ್ರೀಕೃಷ್ಣ 2ನೇ ಭಾಗ), ಯಂ ರಮಾನಂದ ರೈ ದೇಲಂಪಾಡಿ (ಶಲ್ಯ), ವಿಕೇಶ್ ರೈ ಶೇಣಿ (ಅಶ್ವಸೇನ), ಬಿ.ಯಚ್.ವೆಂಕಪ್ಪ ಗೌಡ (ವೃದ್ಧ ಬ್ರಾಹ್ಮಣ) ಪಾತ್ರಧಾರಿಗಳಾಗಿ ಜನಮನವನ್ನು ರಂಜಿಸಿದರು.
ದಿವ್ಯಾನಂದ ಪೆಂರ್ದಲಪದವು ಅವರು ವಂದನಾರ್ಪಣೆ ಸಲ್ಲಿಸಿದರು.
ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಉ ತ್ತಮ ಮಳೆಯ…
ಕರ್ನಾಟಕದಲ್ಲಿ ಮಳೆಯ ಚಟುವಟಿಕೆ ಮತ್ತೆ ಹೆಚ್ಚಾಗುವ ಸೂಚನೆ ದೊರೆತಿದ್ದು, ಮುಂದಿನ ಏಳು ದಿನಗಳ…
ಭಾರತದ ತೆಂಗಿನಕಾಯಿ ರಫ್ತು ಮೌಲ್ಯ ಒಂದೇ ವರ್ಷದಲ್ಲಿ ಶೇ.62ರಷ್ಟು ಏರಿಕೆಯಾಗಿ ₹7,038 ಕೋಟಿಗೆ…
ಒಡಿಶಾದ ಬಾಲಸೋರ್ನಲ್ಲಿ ಸಮುದ್ರ ಮಾರ್ಗದ ಮೂಲಕ ಅಡಿಕೆ ಸಾಗಾಟದ ಹಲವು ಪ್ರಕರಣಗಳು ಪತ್ತೆಯಾಗಿದ್ದು,…
ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಮುಂದುವರಿಯುವ ಸೂಚನೆ ಇದ್ದು, ಸೆ.22ರಿಂದ ಕರಾವಳಿ–ಮಲೆನಾಡಿನಲ್ಲಿ ಮಳೆ…
ತಂದೆಯ ನೆನಪಿಗಾಗಿ ಇಂದೋರ್ನ ವ್ಯಕ್ತಿಯೊಬ್ಬರು ಗೋಮಯದಿಂದ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ತಯಾರಿಸಿ…