ಸುದ್ದಿಗಳು

ದೇಲಂಪಾಡಿಯ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ  “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.

Advertisement

ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.

ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೈಂದೂರು | ಕಡಲ ತೀರದ ಸ್ವಚ್ಛತೆಯ 100ನೇ ವಾರದ ‘ಕ್ಲೀನ್ ಕಿನಾರ’ ಕಾರ್ಯಕ್ರಮ | 50 ಟನ್ ಗಳಷ್ಟು ಕಸ ಸಂಗ್ರಹಿಸಿ ವಿಲೇವಾರಿ |

ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…

2 hours ago

ಹೊಸರುಚಿ | ಗುಜ್ಜೆ ಚಟ್ನಿ

ಗುಜ್ಜೆ ಚಟ್ನಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ:  ಗುಜ್ಜೆ 3/4 ಕಪ್ ,ನೀರು…

3 hours ago

ಮಂಗಳ ಗ್ರಹ ಸಂಚಾರ ಯೋಗ | ಈ 7 ರಾಶಿಗೆ ರಾಜಯೋಗ

2025ರಲ್ಲಿ ಮಂಗಳ ಗ್ರಹವು ವಿವಿಧ ನಕ್ಷತ್ರಗಳಲ್ಲಿ ಸಂಚಾರ ಮಾಡುವುದರಿಂದ ಕೆಲ ರಾಶಿಗಳಿಗೆ ವಿಶೇಷ…

3 hours ago

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವ |

ಶಿವಮೊಗ್ಗದ ನವಲೆ ಕೃಷಿ ವಿಜ್ಞಾನ ಕೇಂದ್ರದ ರಜತ ಮಹೋತ್ಸವದ ಅಂಗವಾಗಿ ಮೂರು ದಿನಗಳ…

12 hours ago

ಬಾಗಲಕೋಟೆ ಮುಧೋಳ ಸೇಬು ಬೆಳೆಗಾರನ ಬಗ್ಗೆ ಮನ್ ಕೀ ಬಾತ್ ನಲ್ಲಿ ಪ್ರಧಾನಿ ಮೋದಿ ಮೆಚ್ಚುಗೆ

ಬೆಟ್ಟಗುಡ್ಡಗಳಲ್ಲಿ ಬೆಳೆಯಲಾಗುವ ಸೇಬನ್ನು ಕರ್ನಾಟಕದಲ್ಲಿಯೂ ಬೆಳೆಯಲಾಗುತ್ತಿದೆ ಎಂದು ಮನ್ ಕಿ ಬಾತ್‌ನಲ್ಲಿ ಪ್ರಧಾನಿ…

1 day ago