ಸುಳ್ಯ: ದೇಲಂಪಾಡಿಯ ಬನಾರಿ ಶ್ರೀ ಗೋಪಾಲಕೃಷ್ಣ ಯಕ್ಷಗಾನ ಕಲಾ ಸಂಘದ ಕೀರಿಕ್ಕಾಡು ಸ್ಮಾರಕ ಯಕ್ಷಗಾನ ಸಾಂಸ್ಕೃತಿಕ ಅಧ್ಯಯನ ಕೇಂದ್ರ ಸಭಾಭವನದಲ್ಲಿ “ಅರ್ಜುನ ತೀರ್ಥಯಾತ್ರೆ” ಯಕ್ಷಗಾನ ತಾಳಮದ್ದಳೆ ಜರಗಿತು.
ರಾಮಯ್ಯ ರೈ ಕಲ್ಲಡ್ಕ ಗುತ್ತು ಹಾಗೂ ಮನೆಯವರಿಂದ ಸೇವಾರೂಪವಾಗಿ ನೆರವೇರಿಸಲ್ಪಟ್ಟ ಈ ಕಲಾ ಕಾರ್ಯಕ್ರಮದ ಮೊದಲಿಗೆ ಶ್ರೀ ಗೋಪಾಲಕೃಷ್ಣ ದೇವರಿಗೆ ವಿಶೇಷ ಪೂಜಾರ್ಚನೆ ಸಲ್ಲಿಸಲಾಯಿತು. ಹಿರಿಯ ಭಾಗವತ ವಿಶ್ವವಿನೋದ ಬನಾರಿ ಅವರ ನಿರ್ದೇಶನದಲ್ಲಿ ಅನಂತರ ನಡೆದ ತಾಳಮದ್ದಳೆಯ ಭಾಗವತರಾಗಿ ನಾರಾಯಣ ತೋರಣಗಂಡಿ, ದಯಾನಂದ ಬಂದ್ಯಡ್ಕ, ಮೋಹನ ಮೆಣಸಿನಕಾನ, ನಿತೀಶ್ ಕುಮಾರ್ ಎಂಕಣ್ಣಮೂಲೆ ಕಾಣಿಸಿಕೊಂಡರು. ಚೆಂಡೆ ಮದ್ದಳೆ ಚಕ್ರತಾಳದಲ್ಲಿ ಮಂಡೆಕ್ಕೋಲು ಅಪ್ಪಯ್ಯ ಮಣಿಯಾಣಿ, ಕಲ್ಲಡ್ಕ ಶಿವರಾಮ ಕಲ್ಲೂರಾಯ, ವಿಷ್ಣುಶರಣ ಬನಾರಿ, ನಾರಾಯಣ ಪಾಟಾಳಿ ಮಯ್ಯಾಳ, ಕೃಷ್ಣಪ್ರಸಾದ್ ಬೆಳ್ಳಿಪ್ಪಾಡಿ, ವಿದ್ಯಾಭೂಷಣ ಪಂಜಾಜೆ, ಕೃಷ್ಣಪ್ಪ ಗೌಡ ಕುತ್ತಿಮುಂಡ, ಬೆಳ್ಳಿಪ್ಪಾಡಿ ಹಳೆಮನೆ ವೆಂಕಪ್ಪ ಗೌಡ ಅವರು ಸಹಕರಿಸಿದರು.
ಅತಿಥಿ ಕಲಾವಿದರಾಗಿ ಆಗಮಿಸಿದ ಕಟೀಲು ಮೇಳದ ಹಾಸ್ಯಗಾರ ರವಿಶಂಕರ ವಳಕುಂಜ ಅವರು ತಮ್ಮ ಅರ್ಥಗಾರಿಕೆಯಲ್ಲಿ ಹಾಸ್ಯದ ಹೊನಲನ್ನು ಹರಿಸಿ ಸಭಾಸದರನ್ನು ರಂಜಿಸಿದರು. ವೆಂಕಟ್ರಮಣ ಮಾಸ್ತರ್ ದೇಲಂಪಾಡಿ, ಯಂ. ರಮಾನಂದ ರೈ ದೇಲಂಪಾಡಿ, ಎ.ಜಿ ಮುದಿಯಾರು, ರಾಮನಾಯ್ಕ್ ದೇಲಂಪಾಡಿ ಅವರು ಮಿಕ್ಕುಳಿದ ಪಾತ್ರಗಳಲ್ಲಿ ಕಾಣಿಸಿಕೊಂಡರು. ಗೋಪಾಲಕೃಷ್ಣ ರೈ ಮುದಿಯಾರು ಸ್ವಾಗತಿಸಿ ಮಿಥುನ್ ರೈ ಕಲ್ಲಡ್ಕ ವಂದಿಸಿದರು.
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…
ತೆಂಗಿನ ಗೆರಟೆಯು ಮೌಲ್ಯವರ್ಧನೆಯಾದಾಗ ತೆಂಗಿನ ಒಟ್ಟಾರೆ ಆದಾಯವೂ ಹೆಚ್ಚಾಗಲು ಸಾಧ್ಯವಿದೆ. ಸದ್ಯ ಸಣ್ಣ…
ಮುಂದಿನ ಎರಡು ದಿನಗಳ ಕಾಲ ಕರಾವಳಿ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಹೆಚ್ಚಿರಲಿದೆ. ಹೀಗಾಗಿ…
2025 ರಲ್ಲಿ ಶನಿ ಮತ್ತು ಬುಧ ಗ್ರಹಗಳ ಸಂಯೋಜನೆಯಿಂದ ನಿರ್ಮಾಣವಾಗುತ್ತಿರುವ ನವಪಂಚಮ ರಾಜಯೋಗವು…
ವಿಕಸಿತ ಕೃಷಿ ಸಂಕಲ್ಪ ಅಭಿಯಾನ ಕಾರ್ಯಕ್ರಮ, ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ಹಾಗೂ…
ಎಲ್ಲಿ ಉಚಿತವೆಂಬ ಆಮಿಶ ಇದೆಯೋ ಅಲ್ಲಿ ತಳ್ಳಾಟವೂ ಇರುತ್ತದೆ. ಸರಕಾರಿ ಬಸ್ ಗಳಲ್ಲಿ…